ಕುಂದಾಪುರ ನೂತನ ಎಸಿಯಾಗಿ ಮಹೇಶ್‌ ಚಂದ್ರ ನೇಮಕ

Update: 2024-07-27 08:43 GMT

ಉಡುಪಿ, ಜು.27: ಕುಂದಾಪುರ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಮಹೇಶ್‌ಚಂದ್ರ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮಹೇಶ್‌ಚಂದ್ರ ಈ ಹಿಂದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕುಂದಾಪುರ ಉಪ ವಿಭಾಗಾಧಿಕಾರಿ ಆಗಿದ್ದ ರಶ್ಮಿ ಆರ್.ಎಸ್. ಅವರನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News