ಡಿ.31ರವರೆಗೆ ಮಂಗಳೂರು ಜಂಕ್ಷನ್-ಮುಂಬೈ ಸಿಎಸ್‌ಎಂಟಿ ರೈಲು ದಾದರ್‌ವರೆಗೆ ಮಾತ್ರ ಸಂಚಾರ

Update: 2023-10-06 12:57 GMT

File Photo 

ಉಡುಪಿ, ಅ.6: ಮಂಗಳೂರು ಜಂಕ್ಷನ್ ಹಾಗೂ ಮುಂಬೈ ಸಿಎಸ್‌ಎಂಟಿ ನಡುವೆ ಸಂಚರಿಸುವ ರೈಲು ನಂ. 12134 ದೈನಂದಿನ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಡಿಸೆಂಬರ್ 31ರವರೆಗೆ ದಾದರ್ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಬೈ ಸಿಎಸ್‌ಎಂಟಿ ನಿಲ್ದಾಣದ ಪ್ಲಾಟ್‌ಫೋರಂ ನಂ.10 ಮತ್ತು 11ರ ವಿಸ್ತರಣಾ ಕಾರ್ಯಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೆಂಟ್ರಲ್ ರೈಲ್ವೆ ಈ ಬದಲಾವಣೆ ಮಾಡಿದೆ. ಇದು ಸೆ.30ರಿಂದ ಡಿ.31ರವರೆಗೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News