ಮಣಿಪಾಲ | ಬೈಕ್ ಡಿವೈಡರ್ ಗೆ ಢಿಕ್ಕಿ: ಯುವಕ ಮೃತ್ಯು
Update: 2023-10-18 04:07 GMT
ಮಣಿಪಾಲ,ಅ.18: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಯುವಕ ಮೃತಪಟ್ಟ ಘಟನೆ ಪರ್ಕಳ ರಾಷ್ಟ್ರೀಯ ಹೆದ್ದಾರಿಯ ಬಿ.ಎಂ.ಸ್ಕೂಲ್ ಬಳಿ ಇಂದು ಮುಂಜಾನೆ ಸಂಭವಿಸಿರುವುದು ವರದಿಯಾಗಿದೆ.
ಮೃತರನ್ನು ಹಿರಿಯಡ್ಕ ನಿವಾಸಿ ಅಕ್ಷಯ ಭಟ್(26) ಎಂದು ಗುರುತಿಸಲಾಗಿದೆ.
ಬಾಣಸಿಗನಾಗಿದ್ದ ಅಕ್ಷಯ್ ಭಟ್ ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆಯ ಅಡುಗೆ ಕೆಲಸ ನಿರ್ವಹಿಸಲು ಇಂದು ಮುಂಜಾನೆ ಮನೆಯಿಂದ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಅಕ್ಷಯ ಭಟ್ ತಲೆಗೆ ತೀವ್ರ ತರಹದ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲದ ಪೊಲೀಸರು ಆಸ್ವತ್ರೆಗೆ ದಾಖಲಿಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು.
ಆದರೆ ಅಷ್ಟರಲ್ಲಿ ಅಕ್ಷಯ್ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.