ಮಣಿಪಾಲ: ಬಸ್ಸಿನ ಚಕ್ರದಡಿಗೆ ಸಿಲುಕಿ ಬಸ್ ಮಾಲಕ ಮೃತ್ಯು

Update: 2024-03-14 05:24 GMT

ಮಣಿಪಾಲ, ಮಾ.14: ಗ್ಯಾರೇಜಿನಲ್ಲಿ ರಿಪೇರಿಗೆ ಇಟ್ಟಿದ್ದ ಬಸ್ಸನ್ನು ಪರಿಶೀಲಿಸಲು ಬಂದಿದ್ದ ಬಸ್ ಮಾಲಕ ಆಕಸ್ಮಿಕವಾಗಿ ಬಸ್ ಚಕ್ರದಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ 80 ಬಡಗಬೆಟ್ಟುವಿನಲ್ಲಿ ನಡೆದಿರುವುದು ವರದಿಯಾಗಿದೆ.

ಮಾಂಡವಿ ಖಾಸಗಿ ಬಸ್ ಮಾಲಕ ದಯಾನಂದ ಶೆಟ್ಟಿ(65) ಮೃತಪಟ್ಟವರು.

ಇವರು ತಮ್ಮ ಬಸ್ಸನ್ನು 80 ಬಡಗಬೆಟ್ಟುವಿನ ಗ್ಯಾರೇಜ್ ವೊಂದರಲ್ಲಿ ರಿಪೇರಿಗೆ ನೀಡಿದ್ದರು. ಅದನ್ನು ನೋಡಲೆಂದು ಬುಧವಾರ ಗ್ಯಾರೇಜಿಗೆ ತೆರಳಿದ್ದರು. ಈ ವೇಳೆ ಚಾಲಕ ಬಸ್ಸನ್ನು ಏಕಾಏಕಿ ಚಲಾಯಿಸಿದ್ದರಿಂದ ಅದರ ಎದುರು ನಿಂತಿದ್ದ ದಯಾನಂದ ಶೆಟ್ಟಿ ಬಸ್ ಚಕ್ರದಡಿಗೆ ಸಿಲುಕಿದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ದಯಾನಂದರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News