ಮನೆಗೆ ನುಗ್ಗಿ ಸೊತ್ತು ಕಳವು

Update: 2023-10-03 15:53 GMT

ಬ್ರಹ್ಮಾವರ, ಅ.3: ಯಡ್ತಾಡಿ ಎಂಬಲ್ಲಿರುವ ಮನೆಗೆ ನುಗ್ಗಿದ ಕಳ್ಳರು ಸಾವಿರಾರು ರೂ.ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಎಚ್.ಕುಶಾಲ ಶೆಟ್ಟಿ(70) ಎಂಬವರು ತಿಂಗಳ ಹಿಂದೆ ಬೆಂಗಳೂರಿನಲ್ಲಿರುವ ಮಗಳ ಮನೆಗೆ ಹೋಗಿದ್ದು ಅ.3ರಂದು ಬೆಳಗ್ಗೆ ಬೆಂಗಳೂರಿನಿಂದ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಮನೆಯಲ್ಲಿನ ಕಪಾಟಿನಲ್ಲಿದ್ದ 50 ಸಾವಿರ ರೂ. ಮೌಲ್ಯದ 6 ರೇಷ್ಮೆ ಸೀರೆಗಳು, 25 ಸಾವಿರ ರೂ. ಮೌಲ್ಯದ 2 ವಾಚುಗಳು ಮತ್ತು 15 ಸಾವಿರ ರೂ. ಮೌಲ್ಯದ ಕ್ಯಾಮಾರ ವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News