ಕ್ರೈಸ್ತ ವಿದ್ಯಾರ್ಥಿಗಳು ಸರಕಾರಿ ಸೇವೆಯತ್ತ ಆಸಕ್ತಿ ವಹಿಸುವುದು ಅಗತ್ಯ: ಬಿಷಪ್ ಜೆರಾಲ್ಡ್ ಲೋಬೊ

Update: 2023-10-08 12:27 GMT

ಉಡುಪಿ, ಅ.8: ವಿದ್ಯಾರ್ಥಿ ಜೀವನದಲ್ಲಿ ಅತೀ ಹೆಚ್ಚಿನ ಪರಿಶ್ರಮ ಪಟ್ಟು ಶಿಕ್ಷಣದಲ್ಲಿ ಸಾಧನೆ ತೋರಿದ್ದಲ್ಲಿ ಮುಂದಿನ ಜೀವನ ದಲ್ಲಿ ಉನ್ನತ ಸ್ಥಾನ ಗಳಿಸಬಹುದಾಗಿದೆ. ಸಮುದಾಯದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಸೇವೆಯತ್ತ ಆಸಕ್ತಿ ತೋರಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.

ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ವತಿಯಿಂದ ರವಿವಾರ ಅಂಬಾಗಿಲಿ ನಲ್ಲಿರುವ ಧರ್ಮಪ್ರಾಂತ್ಯದ ಪಾಲನಾ ಕೇಂದ್ರ ಅನುಗ್ರಹದಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಶಿಕ್ಷಣ ಕ್ಷೇತ್ರ ವಿಸ್ತಾರವಾಗಿದ್ದು ಹೊಸ ಹೊಸ ಪ್ರಯೋಗಗಳಿಗೆ ಇಂದಿನ ವಿದ್ಯಾರ್ಥಿ ಸಮುದಾಯ ಆಸಕ್ತಿಯನ್ನು ತೋರಿ ದಾಗ ಉನ್ನತ ಸ್ಥಾನ ಲಭಿಸಲು ಸಾಧ್ಯವಿದೆ. ಸಮಾಜದಲ್ಲಿ ಹಲವಾರು ಅವಕಾಶಗಳಿದ್ದು ಅದರ ಸದು ಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇಂದಿನ ಮಕ್ಕಳು ಹೆಚ್ಚು ಹೆಚ್ಚು ಎದುರಿಸುವತ್ತ ಗಮನ ಹರಿಸಬೇಕು ಎಂದರು.

ಭಾರತೀಯ ಅಂಚೆ ಸೇವೆಗಳ ನಿವೃತ್ತ ಸದಸ್ಯ ಡಾ.ಚಾರ್ಲ್ಸ್ ಲೋಬೊ ದಿಕ್ಸೂಚಿ ಭಾಷಣ ಮಾಡಿ, ಕ್ರೈಸ್ತ ಸಮುದಾಯ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸರಕಾರಿ ಹುದ್ದೆಗಳತ್ತ ಆಸಕ್ತಿ ತೋರಬೇಕು. ಇದಕ್ಕಾಗಿ ಪ್ರಾಥಮಿಕ ಹಂತದಲ್ಲಿಯೇ ಪ್ರಯತ್ನ ಮಾಡಿದಾಗ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಿದೆ ಎಂದು ತಿಳಿಸಿದರು.

ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಡುಪಿ ಧರ್ಮಪ್ರಾಂತ್ಯ ವ್ಯಾಪ್ತಿಯ 53 ಚರ್ಚುಗಳಲ್ಲಿ ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾ ನೀಡ ಲಾಯಿತು. ಅಲ್ಲದೆ ಪಿಎಚ್‌ಡಿ ಪದವಿ ಪಡೆದ ಡಾ.ಸಿಂಡ್ರೆಲ್ಲಾ ಗೊನ್ಸಾಲ್ವಿಸ್ ಮತ್ತು ಸಿಎ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿನಲ್ ಜೋಸೇಫ್ ಡಿಕೊಸ್ತಾ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಸಂತೋಷ್ ಕರ್ನೆಲಿಯೋ ವಹಿಸಿದ್ದರು. ಜಾನ್ ಡಿಸಿಲ್ವಾ ಫೌಂಡೇಶನ್ ಅಧ್ಯಕ್ಷ ಜಾನ್ ಗ್ಲ್ಯಾಡಿಸ್ ಡಿಸಿಲ್ವಾ, ಕಥೊಲಿಕ್ ಸಭಾ ಉಡುಪಿ ಪ್ರದೇಶದ ಆಧ್ಯಾತ್ಮಿಕ ನಿರ್ದೇಶಕ, ಧರ್ಮ ಪ್ರಾಂತ್ಯದ ಶ್ರೇಷ್ಠಗುರು ಮೊನ್ಷಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ನಿಯೋಜಿತ ಅಧ್ಯಕ್ಷ ರೊನಾಲ್ಡ್ ಆಲ್ಮೇಡಾ, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್, ಮಾಜಿ ಅಧ್ಯಕ್ಷ ವಲೇರಿಯನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಂಚಾಲಕ ಡಾ.ಜೆರಾಲ್ಡ್ ಪಿಂಟೊ ಸ್ವಾಗತಿಸಿದರು. ಕಾರ್ಯದರ್ಶಿ ಒಲಿವೀಯಾ ಡಿಮೆಲ್ಲೊ ವಂದಿಸಿದರು. ಲೆರಿಸ್ಸಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News