ಕನ್ನರ್ಪಾಡಿ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆ

Update: 2023-10-09 12:05 GMT

ಉಡುಪಿ: ಕಿನ್ನಿಮೂಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆಯು ಕೆ.ನಾಗೇಶ್ ಭಟ್ ಅಧ್ಯಕ್ಷತೆಯಲ್ಲಿ ಶನಿವಾರ ಕಿನ್ನಿಮೂಲ್ಕಿ ಶ್ರೀದೇವಿ ಸಭಾಭವನದಲ್ಲಿ ಜರಗಿತು.

ನೂತನ ಅಧ್ಯಕ್ಷರಾಗಿ ಎಂ.ಎನ್.ರಾಜೇಂದ್ರ, ಕಾರ್ಯದರ್ಶಿಯಾಗಿ ಮಂಚಿ ಸುರೇಶ್ ರಾವ್, ಖಜಾಂಚಿಯಾಗಿ ಶ್ರೀಕಾಂತ ಭಟ್ ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆಯಾದರು.

ಈ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ಭಾರತಿ ಭಟ್ ಗೌರವಾರ್ಪಣೆ ಸಲ್ಲಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವೆಂಕಣ್ಣ ಆಚಾರ್ಯ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News