ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-10-09 17:12 GMT

ಕೋಟ, ಅ.9: ಮಾನಸಿಕ ಖಿನ್ನತೆಗೊಳಗಾಗಿದ್ದ ಗುಂಡ್ಮಿ ಗ್ರಾಮದ ಶಂಕರ ಪೂಜಾರಿ ಎಂಬವರ ಮಗ ಯೊಗೀಶ(25) ಎಂಬವರು ಅ.9ರಂದು ಬೆಳಗ್ಗೆ ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ವೈಯಕ್ತಿಕ ಕಾರಣದಿಂದ ಮನನೊಂದ ಸಂಜೀವ ಮೊಗವೀರ (60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.8ರಂದು ಬೆಳಗ್ಗೆ ಕಿರಿಮಂಜೇಶ್ವರ ಗ್ರಾಮದ ನುಕ್ಕಿತ್ತಾರು ಬಯಲು ಎಂಬಲ್ಲಿ ತೋಟದ ಮನೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News