ಶಿವಶರಣೆಯರ ವಚನ ಸಾಹಿತ್ಯಗಳಿಂದ ಸಮಾಜ ಸುಧಾರಣೆ: ಉಡುಪಿ ಜಿಲ್ಲಾಧಿಕಾರಿ
ಉಡುಪಿ: 12ನೇ ಶತಮಾನದಲ್ಲಿ ಶಿವಶರಣೆಯರು ರಚಿಸಿದ ವಚನ ಸಾಹಿತ್ಯಗಳು ವಿಚಾರ ಕ್ರಾಂತಿಯನ್ನು ಮೂಡಿಸುವುದ ರೊಂದಿಗೆ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದ್ದಾರೆ.
ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಕಾಯಕ ಶರಣರ ಜಯಂತಿ ಆಚರಣೆ ಕಾರ್ಯಕ್ರಮ ದಲ್ಲಿ ಮಾದರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಾದರ ಧೂಳಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಅವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಕರ್ನಾಟಕದ ಇತಿಹಾಸದಲ್ಲಿ 12ನೇ ಶತಮಾನ ಮಹತ್ವಪೂರ್ಣವಾದ ಕಾಲಘಟ್ಟ. ಈ ಕಾಲಘಟ್ಟದಲ್ಲಿ ಕಾಯಕ ನಿಷ್ಠೆಯ ಮೂಲಕ ಗುರುತಿಸಿಕೊಂಡ ಪ್ರತಿಯೊಬ್ಬ ಶರಣರು ವಿಶಿಷ್ಟವಾದ ಜೀವನ ನಡೆಸಿದ್ದಾರೆ. ಪ್ರಾಮಾಣಿಕ ಕೆಲಸಕ್ಕೆ ಗೌರವ ದೊರಕುತ್ತದೆ ಎಂಬುದನ್ನು ಇವರುಗಳಿಂದ ತಿಳಿಯ ಬಹುದಾಗಿದೆ. ವೈಚಾರಿಕ ಜ್ಞಾನವನ್ನು ಹೊಂದಿದ್ದ ಇವರುಗಳು ಮಾತು ಮತ್ತು ಕೃತಿಗೆ ವ್ಯತ್ಯಾಸ ಇಲ್ಲದಂತೆ ಸರಳ ಜೀವನ ನಡೆಸಿರುವುದು ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ ಎಂದರು.
ಶಿವಶರಣೆಯರು ಜಾತಿ, ಮತ, ಪಂಥದ ಬೇಧವಿಲ್ಲದೇ ಸಮ ಸಮಾಜದ ಕನಸನ್ನು ಕಂಡು ಅದರಂತೆ ಬದುಕಿ ತೋರಿಸಿ ದ್ದಾರೆ. ಅವರುಗಳ ಆದರ್ಶಗಳು ಇಂದಿಗೂ ದಾರಿದೀಪವಾಗಿದ್ದು, ಅವುಗಳನ್ನು ಪಾಲಿಸುವುದರೊಂದಿಗೆ ವಚನಕಾರರ ತತ್ವಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವ ಕೆಲಸವಾಗಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪನ್ಯಾಸ ನೀಡಿ, ಬಸವಣ್ಣನವರ ಪ್ರಭಾವದಿಂದ 12ನೇ ಶತಮಾನದಲ್ಲಿ ಸಾಮಾಜಿಕ ಹಾಗೂ ಧಾರ್ಮಿಕ ಕ್ರಾಂತಿಯಾಯಿತು. ಪ್ರತಿಯೊಬ್ಬರೂ ಜೀವನ ನಿರ್ವಹಣೆಗೆ ಶ್ರಮವಹಿಸಿ ದುಡಿಯುವುದರೊಂದಿಗೆ ವೃತ್ತಿಧರ್ಮಕ್ಕೆ ಮೋಸ ಮಾಡಬಾರದೆನ್ನುವುದು ವಚನಕಾರರ ಮುಖ್ಯ ಆಶಯ. ಅತ್ಯಂತ ಹಿಂದುಳಿದ ವರ್ಗದಲ್ಲಿ ಹುಟ್ಟಿದ ಕಾಯಕ ಶರಣರು ತಮ್ಮ ಕಾಯಕ ನಿಷ್ಠೆಯಿಂದಲೇ ಸಮಾಜದಲ್ಲಿ ಗುರುತಿಸಿಕೊಂಡು, ಸಾಮರಸ್ಯದ ಜೀವನ ಸಾಗಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕಲಾವಿದ ವಾಸುದೇವ ಬನ್ನಂಜೆ, ಕಸಾಪ ಕಾರ್ಯ ದರ್ಶಿ ನರಸಿಂಹ ಮೂರ್ತಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ ದರು, ಕನ್ನಡ ಉಪನ್ಯಾಸಕ ರಾಮಾಂಜಿ ನಿರೂಪಿಸಿ, ಕೋಶಾಧಿಕಾರಿ ಮನೋಹರ್ ವಂದಿಸಿದರು.