ಕಾರಿಗೆ ಸ್ಕೂಟರ್ ಢಿಕ್ಕಿ: ಲಾರಿ ಹರಿದು ಸವಾರ ಮೃತ್ಯು
Update: 2024-05-15 16:40 GMT
ಕುಂದಾಪುರ, ಮೇ 15: ಕಾರಿಗೆ ಢಿಕ್ಕಿ ಹೊಡೆದು ರಸ್ತೆ ಮೇಲೆ ಬಿದ್ದ ಸ್ಕೂಟರ್ ಸವಾರರೊಬ್ಬರ ಮೇಲೆ ಲಾರಿಯ ಚಕ್ರ ಹರಿದು ಮೃತಪಟ್ಟ ಘಟನೆ ಬಳ್ಕೂರು ಗ್ರಾಮದಲ್ಲಿ ಮೇ 14ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಬಸವ(55) ಎಂದು ಗುರುತಿಸಲಾಗಿದೆ. ಬಸ್ರೂರು ಕಡೆಯಿಂದ ಬಳ್ಕೂರು ಕಡೆಗೆ ಹೋಗುತ್ತಿದ್ದ ಸ್ಕೂಟರ್ ಎದುರಿನ ಕಾರನ್ನು ಹಿಂದಿಕ್ಕುವ ಭರದಲ್ಲಿ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದು, ಇದರಿಂದ ಸ್ಕೂಟರ್ ಪಲ್ಟಿಯಾಗಿ ಸವಾರ ಬಸವ ರಸ್ತೆಯ ಮೇಲೆ ಬಿದ್ದರೆನ್ನಲಾಗಿದೆ.
ಇದೇ ವೇಳೆ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯ ರಸ್ತೆಗೆ ಬಿದ್ದ ಬಸವ ಅವರ ಮೇಲೆ ಹತ್ತಿಸಿಕೊಂಡು ಹೋಗಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.