ಹೆಬ್ರಿ: ಜೆಸಿಬಿ ಢಿಕ್ಕಿ; ಬೈಕ್ ಸವಾರ ಮೃತ್ಯು

Update: 2024-07-05 14:41 GMT

ಪ್ರತ್ಯಕ್ಷ ಶೆಟ್ಟಿ

ಹೆಬ್ರಿ, ಜು.5: ಜೆಸಿಬಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಶಿವಪುರ ಸಮೀಪ ನಾಯರ್ ಕೋಡು ಬಳಿ ಶುಕ್ರವಾರ ನಡೆದಿದೆ.

ಮೃತರನ್ನು ನಾಯರ್‌ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ(21) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ, ಮೃತರ ಸಹೋದರ ಪ್ರೀತಿಶ್ ಗಾಯಗೊಂಡಿದ್ದಾರೆ. ಇವರು ಬೈಕಿನಲ್ಲಿ ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಎದುರಿನಿಂದ ಬಂದ ಜೆಸಿಬಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರತ್ಯಕ್ಷ ಶೆಟ್ಟಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಇವರು ಪತ್ರಿಕೆಯ ವಿತರಕರಾಗಿ, ಶಿವಪುರ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ತಂದೆಯನ್ನು ಕಳೆದು ಕೊಂಡಿದ್ದ ಪ್ರತ್ಯಕ್ಷ, ಮನೆಯ ಆದರ ಸ್ತಂಭವಾಗಿದ್ದರು. ಇವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News