ಉಡುಪಿ: ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಥ

Update: 2024-07-05 15:04 GMT

ಉಡುಪಿ: ಮೆಸ್ಕಾಂ ವಿಭಾಗದ ವತಿಯಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ-2024ರ ಅಂಗವಾಗಿ ಸಾರ್ವಜನಿಕರಿಗೆ ವಿದ್ಯುತ್ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಸಿಬ್ಬಂದಿಗಳ ವಾಹನ ಸಮೇತ ಜಾಥಾಕ್ಕೆ ಮೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಸನ್ನ ಕುಮಾರ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಣರಾಜ್ ಭಟ್, ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಜಾಥಾವು ಮೆಸ್ಕಾಂ ಉಡುಪಿ ವಿಭಾಗೀಯ ಕಚೇರಿಯಿಂದ ಪ್ರಾರಂಭಗೊಂಡು ಮಿತ್ರ ನಸಿರ್ಂಗ್ ಹೋಂ- ಡಯಾನಾ ಸರ್ಕಲ್- ಕೆ.ಎಂ. ಮಾರ್ಗವಾಗಿ ಸರ್ವಿಸ್ ಬಸ್ ನಿಲ್ದಾಣದವರೆಗೆ ಸಾಗಿತು. ಜಾಥಾದಲ್ಲಿ ವಿದ್ಯುತ್ ಸುರಕ್ಷತೆಯ ಕುರಿತು ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಲಾಯಿತು. ವಿದ್ಯುತ್ ಸುರಕ್ಷೆಯ ಮಾಹಿತಿಯನ್ನು ಹೊಂದಿರುವ ಭಿತ್ತಿ ಪತ್ರವನ್ನು ಸಾರ್ವಜನಿಕರಿಗೆ ತರಿಸಲಾಯಿತು.



Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News