ಶ್ಯಾಮ ಪ್ರಸಾದ್ ಮುಖರ್ಜಿ-ವಿ.ಎಸ್.ಆಚಾರ್ಯ ಜನ್ಮ ದಿನಾಚರಣೆ

Update: 2024-07-06 15:54 GMT

ಉಡುಪಿ, ಜು.6: ಜಿಲ್ಲಾ ಬಿಜೆಪಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಕೀರ್ತಿಶೇಷ ಮಾಜಿ ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಜನ್ಮ ದಿನಾಚರಣೆಯು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶನಿವಾರ ನಡೆಯಿತು.

ಶಾಮ ಪ್ರಸಾದ್ ಮುಖರ್ಜಿ ಮತ್ತು ವಿ.ಎಸ್. ಆಚಾರ್ಯ ಅವರ ಭಾವಚಿತ್ರಕ್ಕೆ ಸಾಮೂಹಿಕ ಪುಷ್ಪಾರ್ಚನೆಗೈದು ನಮನ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಸಂಧ್ಯಾ ರಮೇಶ್, ನಳಿನಿ ಪ್ರದೀಪ್ ರಾವ್, ರುಡಾಲ್ಫ್ ಡಿಸೋಜ, ಆಸಿಫ್ ಕಟಪಾಡಿ, ಸಂತೋಷ್ ಜತ್ತನ್ ಹೇರೂರು, ಜಗದೀಶ್ ಆಚಾರ್ಯ ಕಪ್ಪೆಟ್ಟು, ರಾಜೀವ್ ಕುಲಾಲ್, ಸಚಿನ್ ಪೂಜಾರಿ, ಶೈಲೇಂದ್ರ ಶೆಟ್ಟಿ, ಲಕ್ಷ್ಮೀಶ ಬಂಗೇರ, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು, ಗಿರಿಧರ್ ಆಚಾರ್ಯ, ದಾವೂದ್ ಅಬೂಬಕರ್, ಸುರೇಶ್ ಕಾಮತ್ ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News