ಉಡುಪಿ: ವೆಲ್ಫೇರ್ ಸೊಸೈಟಿಯ ವಾರ್ಷಿಕ ಮಹಾಸಭೆ

Update: 2024-09-20 12:25 GMT

ಉಡುಪಿ, ಸೆ.20: ಉಡುಪಿ ಇಸ್ಲಾಮಿಕ್ ವೆಲ್ಫೇರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.19ರಂದು ಉಡುಪಿ ಜಾಮಿಯಾ ಮಸೀದಿಯ ನೆಲ ಅಂತಸ್ತಿನಲ್ಲಿ ನಡೆಯಿತು.

ಸೊಸೈಟಿಯ ಅಧ್ಯಕ್ಷ ರಿಯಾಝ್ ಅಹ್ಮದ್ ಕುಕ್ಕಿಕಟ್ಟೆ ಅಧ್ಯಕ್ಷತೆಯನ್ನು ವಹಿಸಿದ್ದರು. ಜಮಾಅತೆ ಇಸ್ಲಾಮಿ ಹಿಂದ್ ವಲಯ ಸಂಚಾಲಕ ಸಯೀದ್ ಇಸ್ಮಾಯಿಲ್ ಮುಖ್ಯ ಅತಿಥಿಯಾಗಿದ್ದರು. ಸೊಸೈಟಿಯ ಮುಖ್ಯ ಸಲಹೆಗಾರ ನರಸಿಂಹ ಸ್ವಾಮಿ ಸಂದರ್ಭೋಚಿತವಾಗಿ ಮಾತನಾಡಿದರು.

ಮೌಲಾನಾ ದಾನಿಶ್ ಪ್ರಾರ್ಥಿಸಿದರು. ನಿರ್ದೇಶಕ ಜಿ.ಶುಐಬ್ ಅಹ್ಮದ್ ಮಲ್ಪೆಸ್ವಾಗತಿಸಿದರು. ರಯೀಸ್ ಅಹ್ಮದ್ ಮಹಾಸಭೆಯ ಆಮಂತ್ರಣ ಪತ್ರಿಕೆಯನ್ನು ಓದಿ ದಾಖಲಿಸಿದರು. ಉಪಾಧ್ಯಕ್ಷ ನಿಸಾರ್ ಅಹಮದ್ ವಾರ್ಷಿಕ ವರದಿಯನ್ನು ಓದಿದರು. ಕಾರ್ಯದರ್ಶಿ ಆರಿಫ್ ಕಾಶಿಂ ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು. ನಿರ್ದೇಶಕ ಜಿ.ಎಂ. ಶರೀಫ್ ಹೂಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News