ಉಡುಪಿ ನ್ಯಾಯಾಲಯ, ವಕೀಲರ ಸಂಘದ ಶತಮಾನೋತ್ತರ ಬೆಳ್ಳಿಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2024-09-25 15:39 GMT

ಉಡುಪಿ, ಸೆ.25: ಉಡುಪಿ ವಕೀಲರ ಸಂಘವು ನವೆಂಬರ್ 17 ಮತ್ತು 18ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋ ತ್ತರ ಬೆಳ್ಳಿಹಬ್ಬ (125ನೇ ವರ್ಷಾಚರಣೆ) ಸಮಾರಂಭವನ್ನು ಉಡುಪಿ ನ್ಯಾಯಾಲಯದ ಆವರಣ ದಲ್ಲಿ ಆಯೋಜಿಸಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಇಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಶ್ರೀಕ್ಷೇತ್ರದ ಧರ್ಮಾಧಿಕಾರಿಗಳು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭ ಉಡುಪಿ ವಕೀಲರದ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿಹಬ್ಬ ಕಾರ್ಯಕ್ರಮ ಸಮಿತಿಯ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ್ ಹೆಗ್ಡೆ, ವಕೀಲರ ಸಂಘದ ಉಪಾಧ್ಯಕ್ಷ ಮಿತ್ರಕುಮಾರ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಆರೂರ್ ಸುಕೇಶ್ ಶೆಟ್ಟಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ನಾಗರಾಜ್ ಹಾಗೂ ಹಿರಿಯ ವಕೀಲರಾದ ಆನಂದ ಮಡಿವಾಳ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News