ಸೇವಾ ಪಾಕ್ಷಿಕ, ಸದಸ್ಯತ್ವ ಅಭಿಯಾನ, ಮನ್ ಕೀ ಬಾತ್ ವೀಕ್ಷಣೆಗೆ ವೇಗ ನೀಡಿ: ಕಿಶೋರ್ ಕುಮಾರ್

Update: 2024-09-28 15:16 GMT

ಉಡುಪಿ, ಸೆ.28: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಸೆ.17ರಿಂದ ಅ.2 ಗಾಂಧಿ ಜಯಂತಿ ಆಚರಣೆಯ ವರೆಗೆ ವಿವಿಧ ಸೇವಾ ಚಟುವಟಿಕೆ ಗಳೊಂದಿಗೆ ನಡೆಯುತ್ತಿರುವ ಸೇವಾ ಪಾಕ್ಷಿಕ ಮತ್ತು ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ವೇಗ ನೀಡುವ ಜೊತೆಗೆ ಸೆ.29ರಂದು ಬೆಳಿಗ್ಗೆ 11.00 ಗಂಟೆ ನಡೆಯುವ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮದ ನೇರ ಪ್ರಸಾರವನ್ನು ಎಲ್ಲರು ವೀಕ್ಷಿಸಿ, ಉಡುಪಿ ಜಿಲ್ಲೆ ಈ ಎಲ್ಲಾ ಅಭಿಯಾನಗಳಲ್ಲಿ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆಯುವಂತೆ ಶ್ರಮ ವಹಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದ್ದಾರೆ.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಸದಸ್ಯತಾ ಅಭಿಯಾನದ ಜಿಲ್ಲಾ ಸಂಚಾಲಕ ಮಟ್ಟಾರ್ ರತ್ನಾಕರ ಹೆಗ್ದೆ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಕ್ರಮಗಳ ಕುರಿತು ಹಾಗೂ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಬೂತ್ ಶಹ ಮನ್ ಕೀ ಬಾತ್ ವೀಕ್ಷಣೆ ಮತ್ತು ವರದಿ ಅಪ್ಲೋಡ್ ಮಾಡುವ ಕುರಿತು ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್.ಕಲ್ಮಾಡಿ, ದ.ಕ.ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ರಾಜ್ಯ ಎಸ್.ಸಿ.ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಕ್ಯಾತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News