ರಸ್ತೆ ಅಪಘಾತ: ಓರ್ವ ಮೃತ್ಯು, ಮೂವರಿಗೆ ಗಾಯ

Update: 2024-09-29 16:07 GMT

ಕುಂದಾಪುರ, ಸೆ.29: ಬುಲೆಟ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸೆ.28ರಂದು ರಾತ್ರಿ ವೇಳೆ ಹಂಗಳೂರು ನಗು ಪ್ಯಾಲೇಸ್ ಎದುರು ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಬೈಕ್ ಸವಾರ ಶಶಾಂಕ ಎಂದು ಗುರುತಿಸಲಾಗಿದೆ. ಬುಲೇಟ್ ಸವಾರ ಪುನೀತ, ಸಹಸವಾರಿಣಿ ಪದ್ಮಾ ಹಾಗೂ ಬೈಕ್ ಸಹಸವಾರ ಋತೀಕ ಎಂಬವರು ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿ ದ್ದಾರೆ.

ಕುಂದಾಪುರ ಕಡೆಯಿಂದ ಕೋಟೇಶ್ವರ ಕಡೆಗೆ ಹೋಗುತ್ತಿದ್ದ ಬುಲೆಟ್ ಎದುರಿನಿಂದ ಬಂದ ಬೈಕ್‌ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ನಾಲ್ವರು ಸವಾರರು ರಸ್ತೆಗೆ ಬಿದ್ದು ಗಾಯಗೊಂಡರೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಗಾಯ ಗೊಂಡ ಶಶಾಂಕ್ ಸೆ.29ರಂದು ನಸುಕಿನ ವೇಳೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News