ಮಾನವ ರಕ್ತಕ್ಕೆ ಪರ್ಯಾಯವಿಲ್ಲ; ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ: ಉಡುಪಿ ಡಿಸಿ ವಿದ್ಯಾಕುಮಾರಿ

Update: 2024-10-01 14:11 GMT

ಉಡುಪಿ: ಜಗತ್ತಿನಲ್ಲಿ ಮಾನವನ ರಕ್ತಕ್ಕೆ ಯಾವುದೇ ಪರ್ಯಾಯ ಇದುವರೆಗೆ ಬಂದಿಲ್ಲ. ಹೀಗಾಗಿ ಒಂದೊಂದು ರಕ್ತದ ಹನಿಯು ಮೌಲ್ಯ ಯುತವಾಗಿದ್ದು, ಅದನ್ನು ಸೃಜಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಅರ್ಹರು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ತಿಳಿಸಿದ್ದಾರೆ.

ಮಂಗಳವಾರ ಮಣಿಪಾಲದ ಎಂಐಎಎಂಎಸ್ ಬುದ್ಧ ಆಯುರ್ವೇದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, ರೋಟರ್ಯಾಕ್ಟ್ ಕ್ಲಬ್, ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್‌ನ ರಾಷ್ಟ್ರೀಯ ಸೇವಾ ಯೋಜನೆ,ಆದರ್ಶ ಕಾಲೇಜ್ ಆಫ್ ನರ್ಸಿಂಗ್, ಉಡುಪಿ ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್, ಶ್ರೀಆದರ್ಶ ಕಾಲೇಜ್ ಆಫ್ ಅಲೈಡ್ ಎಂಡ್ ಪ್ಯಾರಾ ಮೆಡಿಕಲ್ ಸೈನ್ಸ್ ಮತ್ತು ಎಚ್‌ಪಿಆರ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಎಂಡ್ ಪ್ಯಾರಾಮೆಡಿಕಲ್ ಸೈನ್ಸ್ ಮಣಿಪಾಲ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಮಾಜದಲ್ಲಿ ಅನೇಕರು ಸರಿಯಾದ ಸಮಯದಲ್ಲಿ ರಕ್ತ ದೊರೆಯದೇ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ರಕ್ತದಾನದ ಮೂಲಕ ಆಪತ್ತಿನಲ್ಲಿರು ವವರ ಅಮೂಲ್ಯವಾದ ಜೀವವನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬ ರಕ್ತದಾನಿಯನ್ನು ಗುರುತಿಸಿ ಸನ್ಮಾನಿಸುವ ಮೂಲಕ ಅವರಿಗೆ ಇನ್ನಷ್ಟು ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಸಾಕಷ್ಟು ಮಂದಿ ರಕ್ತದಾನಿಗಳಿದ್ದು, ಇದುವರೆಗೂ ರಕ್ತದ ಕೊರತೆ ಕಂಡುಬಂದಿಲ್ಲ. ಅಲ್ಲದೇ ನಮ್ಮ ಅಕ್ಕಪಕ್ಕದ ಜಿಲ್ಲೆಗಳಲ್ಲಿ ರಕ್ತದ ಕೊರತೆ ಉಂಟಾದ ಸಂದರ್ಭದಲ್ಲಿ ಸಹ ನಮ್ಮ ಜಿಲ್ಲೆಯಿಂದಲೇ ರಕ್ತ ರವಾನೆ ಮಾಡಲಾಗುತ್ತಿದೆ. ರಕ್ತದ ಮಹತ್ವವನ್ನು ಅರಿತು ರಕ್ತದಾನ ಮಾಡಲು ಯುವ ಜನತೆ ಸ್ವಯಂಪ್ರೇರಿತವಾಗಿ ಮುಂದೆ ಬರಬೇಕು ಎಂದರು.

ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಅಭ್ಯಾಸ ವನ್ನು ಕಾಲೇಜು ಹಂತದಿಂದಲೇ ರೂಢಿಸಿಕೊಳ್ಳಬೇಕು. ರಕ್ತದಾನ ಮಾಡುವುದರಿಂದ ಉತ್ತಮ ಅರೋಗ್ಯ ಹೊಂದಬ ಹುದಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ಅನಿತಾ ಡಿ ಸೋಜಾ, ಮೋಹಿತ್ ಪೆರ್ಡೂರು, ಸ್ವೀಟಿ ಜೆ ಫರ್ನಾಂಡೀಸ್, ದಿನೇಶ್ ಕಾಂಚನ್, ಸುಕೇಶ್ ಖಾರ್ವಿ ಮತ್ತು ಪುರುಷೋತ್ತಮ ಶೆಟ್ಟಿ ಇವರುಗಳನ್ನು ಸನ್ಮಾನಿಸಲಾ ಯಿತು. ಅಲ್ಲದೇ ರಕ್ತದಾನ ಶಿಬಿರದಲ್ಲಿ ಒಟ್ಟು 175 ಯೂನಿಟ್ ರಕ್ತವನ್ನು ಸಂಗ್ರಹಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾಕುಮಾರಿ, ಆದರ್ಶ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲೆ ಸುದಿನ ಎಂ, ಆದರ್ಶ ಕಾಲೇಜ್ ಆಫ್ ಅಲೈಡ್ ಎಂಡ್ ಪ್ಯಾರಾಮೆಡಿಕಲ್ ಸೈನ್ಸ್‌ನ ಪ್ರಾಂಶುಪಾಲ ಪ್ರೊ.ರವಿಕುಮಾರ್ ಟಿ.ಎನ್, ಹೆಚ್.ಪಿ.ಆರ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಎಂಡ್ ಪ್ಯಾರಾಮೆಡಿಕಲ್ ಸೈನ್ಸ್‌ನ ಪ್ರಾಂಶುಪಾಲೆ ದಿವ್ಯಾಶ್ರೀ, ಸಂತೆಕಟ್ಟೆಯ ಉಡುಪಿ ಧನ್ವಂತರಿ ಕಾಲೇಜು ಆಫ್ ನರ್ಸಿಂಗ್‌ನ ಆಡಳಿತಾಧಿಕಾರಿ ಉದಯಕುಮಾರ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯದ ಅಧ್ಯಕ್ಷ ರಘುನಾಥ ನಾಯಕ್, ಎನ್ನೆಸ್ಸೆಸ್ ನೋಡೆಲ್ ಅಧಿಕಾರಿ ಡಾ. ನವನೀತ ಕೆ.ಪಿ. ಉಪಸ್ಥಿತರಿದ್ದರು.

ಕಾರ್ಯಕ್ರಮ ಮೇಲ್ವಿಚಾರಕ ಮಹಾಬಲೇಶ್ವರ ಬಿ.ಎಂ ಸ್ವಾಗತಿಸಿದರು. ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಚಿದಾನಂದ ಸಂಜು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಎನ್ನೆಸ್ಸೆಸ್ ನೋಡೆಲ್ ಅಧಿಕಾರಿ ಡಾ. ಆಶಿತ ಆರ್. ಕಾರ್ಯಕ್ರಮ ನಿರೂಪಿಸಿ, ಪ್ರೊ. ಡಾ. ಮಾಧವಿ ವಂದಿಸಿದರು.



 


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News