ವಂಡ್ಸೆ ಎಸ್‌ಎಲ್‌ಆರ್‌ಎಂ ಘಟಕದವರಿಗೆ ಸನ್ಮಾನ

Update: 2024-10-05 12:06 GMT

ಕುಂದಾಪುರ, ಅ.5: ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆ ತಾಲೂಕು ಸಮಿತಿ ಕುಂದಾಪುರ-ಬೈಂದೂರು ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಏಳು ಗ್ರಾಮಗಳನ್ನು ಸ್ವಚ್ಛಗೊಳಿಸುವ ಮೂಲಕ ಗ್ರಾಮಗಳ ನೈರ್ಮಲ್ಯ ಗಳನ್ನು ಕಾಪಾಡುತ್ತ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸನ್ನು ನನಸಾಗಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡು ರಾಜ್ಯಕ್ಕೆ ಮಾದರಿ ಘಟಕವಾಗಿ ರುವ ವಂಡ್ಸೆ ಎಸ್‌ಎಲ್‌ಆರ್‌ಎಂ ಘಟಕದ ಮೇಲ್ವಿಚಾರಕಿ ಶ್ವೇತಾ ಹಾಗೂ ಕಾರ್ಯದರ್ಶಿ ಅಶ್ವಿನಿ ಅವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಘಟಕದ ಉಳಿದ ಎಲ್ಲಾ ಸಿಬ್ಬಂದಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್., ಜಿಲ್ಲಾ ಮಟ್ಟದ ಅತ್ಯುತ್ತಮ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಸ್ತಿ ಪುರಸ್ಕೃತ ವಂಡ್ಸೆ ವಲಯ ಸಿಆರ್‌ಪಿ ನಾಗರಾಜ್ ಶೆಟ್ಟಿ ಅವರನ್ನು ಗೌರವಿಸ ಲಾಯಿತು. ಎಸ್‌ಎಲ್‌ಆರ್‌ಎಂ ಘಟಕದ ಉಸ್ತುವಾರಿ, ಗ್ರಾಪಂ ಅಧ್ಯಕ್ಷೆ ಗೀತಾ ಅವಿನಾಶ್, ಮಾಜಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಿಕಾ ಕಾರ್ಯದರ್ಶಿ ಶಶಿ ಬಳ್ಕೂರು, ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಸಾಧಿಕ್ ಮಾವಿನಕಟ್ಟೆ, ಕುಂದಾಪುರ ಪುರಸಭಾ ಘಟಕದ ಕಾರ್ಯದರ್ಶಿ ವರದ ಆಚಾರ್ಯ ಅಂಕದಕಟ್ಟೆ ಉಪಸ್ಥಿತರಿದ್ದರು. ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಎಸ್.ವಿ.ನಾಗರಾಜ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News