ಪುಸ್ತಕಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

Update: 2024-10-05 14:00 GMT

ಉಡುಪಿ, ಅ.5: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಣೆ ಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಆಯ್ಕೆಯಾದ ಪುಸ್ತಕಗಳ ತಾತ್ಕಾಲಿಕ ಪಟ್ಟಿಯನ್ನು ನಗರದ ಅಜ್ಜರಕಾಡು ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋಂದಾ ಚಾರ್ಯ ಸ್ಮಾರಕ ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯದ ಕಛೇರಿಗಳ ನೋಟಿಸ್ ಬೋರ್ಡ್‌ನಲ್ಲಿ ಮತ್ತು ಇಲಾಖಾ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಅ.9ರೊಳಗೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ ಬಿ.ಆರ್.ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು. ನಂತರ ಬಂದ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News