ಗಂಗನಾಡು, ಕ್ಯಾರ್ತುರು ಪರಿಸರದಲ್ಲಿ ವೈದ್ಯಕೀಯ ಶಿಬಿರ

Update: 2024-10-06 15:08 GMT

ಬೈಂದೂರು, ಅ.6: ಬೈಂದೂರು ವಿಧಾನಸಭಾ ಕ್ಷೇತ್ರದ ಹಳ್ಳಿ ಪ್ರದೇಶವಾದ ಗಂಗನಾಡು, ಕ್ಯಾರ್ತುರು ಭಾಗದಲ್ಲಿ ವೈದ್ಯಕೀಯ ಶಿಬಿರ ನಡೆಸಿ ಫಲಾನುಭವಿಗಳಿಗೆ ಉಚಿತ ತಪಾಸಣೆ, ಚಿಕಿತ್ಸೆಯ ಜತೆಗೆ ಔಷಧಗಳನ್ನು ವಿತರಿಸಲಾಯಿತು.

ಶಿಬಿರದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು. ಬಳಿಕ ಮಾತನಾಡಿದ ಅವರು, ಪ್ರತಿ ಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಇಂತಹ ಶಿಬಿರಗಳ ಪೂರ್ಣ ಉಪಯೋಗ ಪಡೆಯಬೇಕು. ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ ಹಲವು ಕಾಯಕ್ರಮ ನಡೆಸುತ್ತಿದ್ದೇವೆ ಎಂದರು.

ಮುಂದೆಯೂ ಸತತವಾಗಿ ಪ್ರತೀ ತಿಂಗಳು ಸಮೃದ್ಧ ಬೈಂದೂರು ಹಳ್ಳಿ ಪ್ರದೇಶಗಳಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಸ ಲಾಗುವುದು. ಹಳ್ಳಿಪ್ರದೇಶದ ಪ್ರತೀ ಗ್ರಾಮಸ್ಥರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ವೈದ್ಯಧಿಕಾರಿಗಳು ಮತ್ತು ಶಾಸಕರು ಕರೆ ನೀಡಿದರು.

ಸಮೃದ್ಧ ಬೈಂದೂರು ಟ್ರಸ್ಟ್ ಅಧ್ಯಕ್ಷ ಎಸ್.ಸುರೇಶ್ ಶೆಟ್ಟಿ, ಗಂಗನಾಡು ಶಾಲಾ ಮುಖ್ಯ ಶಿಕ್ಷಕ ಪ್ರಭಾಕರ್ ಬಿಲ್ಲವ, ಎಸ್‌ಡಿಎಂಸಿ ಅಧ್ಯಕ್ಷ ರಾಜು ಮರಾಠಿ ಹಾಗೂ ವೈದ್ಯರುಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News