ರಸ್ತೆ ಅಪಘಾತ: ಗಾಯಾಳು ಪಾದಚಾರಿ ಮೃತ್ಯು

Update: 2024-10-06 15:35 GMT

ಪಡುಬಿದ್ರಿ, ಅ.6: ಎರ್ಮಾಳು ಜನಾರ್ದನ ದೇವಸ್ಥಾನ ಸಮೀಪ ರಾ.ಹೆ. 66ರಲ್ಲಿ ಕೆಲ ದಿನಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಅದಮಾರು ಮಾರುತಿ ನಗರದ ನಿವಾಸಿ ಸುದರ್ಶನ್ ಎಂದು ಗುರುತಿಸಲಾಗಿದೆ. ಇವರು ಅ.1ರಂದು ರಾತ್ರಿ ರಸ್ತೆ ದಾಟುತ್ತಿದ್ದಾಗ ಪಡುಬಿದ್ರಿ ಕಡೆಯಿಂದ ಉಚ್ಚಿಲ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಸುದರ್ಶನ್, ಚಿಕಿತ್ಸೆ ಫಲಕಾರಿ ಯಾಗದೆ ಅ.5ರಂದು ಸಂಜೆ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News