ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ಆಯ್ಕೆ
Update: 2024-10-07 15:30 GMT
ಕುಂದಾಪುರ, ಅ.7: ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತು ವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯ ರಾಜ್ಯ ನಿರ್ದೇಶಕರಾಗಿ ಕುಂದಾಪುರ ತಾಲೂಕಿನ ಅಬ್ದುಲ್ ಸಲಾಂ ಚಿತ್ತೂರು ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ ಸಂಚಾಲಕ ಮೊಯಿದಿನ್ ಕುಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.