ಕನ್ನಡ ನಾಮಫಲಕ ಕಡ್ಡಾಯ: ಪೌರಾಯುಕ್ತರಿಗೆ ಕರವೇ ಮನವಿ
Update: 2024-10-08 12:22 GMT
ಉಡುಪಿ, ಅ.8: ಉಡುಪಿ ನಗರದಲ್ಲಿ ಶೇ.60 ಕನ್ನಡ ನಾಮಫಲಕ ಕಡ್ಡಾಯ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಉಡುಪಿ ನಗರಸಭೆಯ ಪೌರಾಯುಕ್ತ ರಾಯಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ನಗರ ಸಭೆ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಎಚ್ಚರಿಕೆ ನೀಡಿದರು.
ಈ ಸಂದರ್ಭ ಕರವೇ ಜಿಲ್ಲಾ ಮಹಿಳಾ ಅಧ್ಯಕ್ಷೆ ಗೀತಾ ಪಾಂಗಾಳ, ಮಹಿಳಾ ಉಪಾಧ್ಯಕ್ಷೆ ದೇವಕಿ ಬಾರ್ಕೂರ್, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಅಲ್ಫನ್ಸ್, ಗೋಪಾಲ್ ದೊರೆ, ಜಿಲ್ಲಾ ಕಾರ್ಯದರ್ಶಿ ಯೋಗೇಶ್ ಕೋಟ್ಯನ್ ಹಾಗೂ ಜಿಲ್ಲಾ ಸದಸ್ಯರಾದ ಜಾಫರ್, ಸಿದ್ದು, ಅಂಬರೀಶ್ ಮೌನೇಶ್, ವಿಶ್ವನಾಥ್, ಜೆ ಟ್ಟಿಂಗರಾಯ, ಮಡಿಯಪ್ಪ, ಬಸವರಾಜ್, ಬಸವರಾಜ್ ಉಪಸ್ಥಿತರಿದ್ದರು.