ಆಲ್ವಿನ್ ಡಿಸೋಜ ಹಲ್ಲೆ ಕೋರರನ್ನು ಬಂಧಿಸಿ: ಕಥೊಲಿಕ್ ಸಭಾ ಆಗ್ರಹ

Update: 2024-10-08 12:25 GMT

ಉಡುಪಿ, ಅ.8: ಮರಳು ಮಾಫಿಯಾದ ವಿರುದ್ದ ಧ್ವನಿ ಎತ್ತಿದ್ದ ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷ ಆಲ್ವಿನ್ ಡಿಸೋಜ ಅವರ ಮೇಲೆ ದುಷ್ಕರ್ಮಿಗಳು ನಡೆಸಿರುವ ಮಾರಣಾಂತಿಕ ಹಲ್ಲೆ ಖಂಡನೀಯ. ಕೃತ್ಯವೆಸಗಿ ರುವ ದುಷ್ಕರ್ಮಿ ಗಳನ್ನು ಈವರೆಗೆ ಬಂಧಿಸದೇ ಇರುವ ಪೊಲೀಸರ ನಡೆ ನಿಜಕ್ಕೂ ಸಂಶಯಗಳಿಗೆ ಕಾರಣವಾಗಿದೆ. ಆದುದರಿಂದ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಗ್ರಹಿಸಿದೆ.

ಉಳಿಯ ಪಾವೂರು, ರಾಣಿಪುರ, ಉಳ್ಳಾಲ ಹೊಯ್ಗೆ, 62ನೇ ತೋಕೂರು ಕೆಂಜಾರು ಈ ಪ್ರದೇಶಗಳ ದ್ವೀಪಗಳನ್ನು ಉಳಿ ಸುವ ಉದ್ದೇಶದಿಂದ ಸಾರ್ವಜನಿಕರೊಂದಿಗೆ ಸೇರಿಕೊಂಡು ಅಕ್ರಮ ಮರಳುಗಾರಿಕೆಯ ವಿರುದ್ದ ಧ್ವನಿ ಎತ್ತಿದ್ದು ಇದನ್ನು ಸಹಿಸದ ದುಷ್ಕರ್ಮಿಗಳು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳುವು ದಾಗಿ ಕೇವಲ ಹೇಳಿಕೆಗೆ ಸೀಮಿತವಾಗಿದ್ದು ಈ ಪ್ರಕೃತಿಯನ್ನು ನಾಶಗೊಳಿಸು ವವರ ವಿರುದ್ದ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ಪರೋಕ್ಷವಾಗಿ ಕೈಜೋಡಿಸಿದಂತೆ ಕಾಣಿಸುತ್ತದೆ.

ಘಟನೆ ನಡೆದು ಮೂರು ನಾಲ್ಕು ದಿನಗಳು ಕಳೆದರೂ ಕೂಡ ದುಷ್ಕರ್ಮಿ ಗಳನ್ನು ಬಂಧಿಸದೆ ಇರುವುದು ನಾಚೀಕೆಗೇಡಿನ ಸಂಗತಿಯಾಗಿದೆ. ಕೂಡಲೇ ಆಲ್ವಿನ್ ಅವರ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಬಂಧಿಸುವ ಕೆಲಸ ಜಿಲ್ಲಾಡಳಿತ ನಡೆಸಬೇಕು. ಇದಕ್ಕೆ ತಪ್ಪಿದ್ದಲ್ಲಿ ಕಥೊಲಿಕ್ ಸಭಾ ಸಂಘಟನೆ ಎರಡು ಜಿಲ್ಲೆಯ ಜನರನ್ನು ಸೇರಿಸಿಕೊಂಡು ಪ್ರತಿಭಟಿಸುವ ಕೆಲಸ ಮಾಡಲಿದೆ. ಈ ಪ್ರಕೃತಿಯನ್ನು ನಾಶಗೊಳಿಸುವವರ ವಿರುದ್ದ ನಮ್ಮ ಮೇಲೆ ಇನ್ನೆಷ್ಟು ಹಲ್ಲೆ ನಡೆಸಿದರೂ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ ಎಂದು ಕಥೊಲಿಕ್ ಸಭಾ ಉಡುಪಿ ಪ್ರದೇಶ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News