ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2024-10-08 15:33 GMT

ಹೆಬ್ರಿ, ಅ.8: ವೈಯಕ್ತಿಕ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ನಾಲ್ಕೂರು ಗ್ರಾಮದ ಮಿಯ್ಯಾರು ವಸಂತ(39) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.7ರಂದು ಮಧ್ಯಾಹ್ನ ವೇಳೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ಸಾಲ ಹಾಗೂ ವಿಪರೀತ ಕುಡಿತದ ಚಟದಿಂದ ಮನನೊಂದ ಮಣಿಪುರ ಗ್ರಾಮದ ಸಂತೋಷ್(39) ಎಂಬವರು ಅ.7ರಂದು ಸಂಜೆ ವೇಳೆ ಮನೆಯ ಡೈನಿಂಗ್ ಹಾಲ್‌ನ ಮರದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News