ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2024-10-10 15:23 GMT

ಕಾಪು, ಅ.10: ವೈಯಕ್ತಿಕ ಕಾರಣದಿಂದ ಮನನೊಂದ ಮಣಿಪುರ ಗ್ರಾಮದ ಕೃಷ್ಣ(74) ಎಂಬವರು ಅ.9ರಂದು ಸಂಜೆ ವೇಳೆ ಮನೆ ಸಮೀಪದ ಪಾಳು ಬಿದ್ದ ಮನೆಯ ಹಾಲ್‌ನ ಮರದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕ: ವೈಯಕ್ತಿಕ ಕಾರಣದಿಂದ ಮನನೊಂದು ಅ.8ರಂದು ಮನೆಯಲ್ಲಿ ವಿಷ ಪದಾರ್ಥವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ 41ನೇ ಶಿರೂರು ಗ್ರಾಮದ ಕೊಡ್ಸಾಲ್‌ಬೆಟ್ಟು ನಿವಾಸಿ ಆನಂದ(64) ಎಂಬವರು ಅ.9ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News