ಹೊಳೆಯಲ್ಲಿ ಮುಳುಗಿ ವ್ಯಕ್ತಿ ಮೃತ್ಯು

Update: 2024-10-10 15:38 GMT

ಶಂಕರನಾರಾಯಣ, ಅ.10: ಎರಡು ದಿನಗಳ ಹಿಂದೆ ಭಾರೀ ಗಾಳಿಮಳೆಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆ ಯಾಗಿದ್ದ ಕೊಡ್ಲಾಡಿ ಗ್ರಾಮದ ಶೇಖರ(60) ಎಂಬವರು ಮೃತದೇಹ ಇಂದು ಸಂಜೆ ವೇಳೆ ಪತ್ತೆಯಾಗಿದೆ.

ಅ.7ರಂದು ಇವರು ಸಿದ್ದಾಪುರದಲ್ಲಿ ಸಂಬಂಧಿಕರ ಮದುವೆಯನ್ನು ಮುಗಿಸಿ ಅಂಪಾರಿಗೆ ಬಂದು ಅಲ್ಲಿಂದ ಮನೆಗೆ ನಡೆದುಕೊಂಡು ಹೋಗಿ ಮನೆಯ ಸಮೀಪದ ಹೊಳೆಯನ್ನು ದಾಟುವಾಗ ವಿಪರಿತ ಗಾಳಿ, ಮಳೆಯಿಂದ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅ.9ರಂದು ಸಂಜೆ ವೇಳೆ ಇವರ ಮೃತದೇಹವು ಆಜ್ರಿ ಗ್ರಾಮದ ಕೊಡ್ಗಿ ಹೊಳೆಯ ಮಧ್ಯದಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News