ಉಮೇಶ್ ನಾಯ್ಕ್ ವಿರುದ್ಧ ಕಾನೂನು ಕ್ರಮಕೈಗೊಳ್ಳಿ: ಸುಂದರ್ ಮಾಸ್ತರ್

Update: 2024-10-12 15:14 GMT

ಸುಂದರ್ ಮಾಸ್ತರ್

ಉಡುಪಿ, ಅ.12: ಅಂಬೇಡ್ಕರ್ ಮತ್ತು ದಲಿತರಿಗೆ ಅವಮಾನ ಮಾಡಿದ ಉಮೇಶ ನಾಯ್ಕನ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ದಸಂಸ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಒತ್ತಾಯಿಸಿದ್ದಾರೆ.

ಹಿಂದು ಜಾಗರಣಾ ವೇದಿಕೆಯ ಮುಖಂಡನಾದ ಉಮೇಶ ನಾಯ್ಕನು ಸ್ವತಃ ಮರಾಠಿಗರು ದಲಿತರಲ್ಲಾ ಆಮಂತ್ರಣ ಪತ್ರಿಕೆ ಯಲ್ಲಿರುವ ಅಂಬೇಡ್ಕರ್ ಭಾವಚಿತ್ರವನ್ನು ತೆಗೆದು ಶಿವಾಜಿಯ ಫೋಟೋ ಹಾಕಬೇಕು. ದಲಿತರು ದನದ ಮತ್ತು ಕೋಣದ ಮಾಂಸ ತಿನ್ನುವವರು.ಸ್ಮಶಾನದಲ್ಲಿ ಮಲಗುವವರು ಎಂದು ಸಾರ್ವಜನಿಕವಾಗಿ ಘೋಷಣೆ ಮಾಡಿ ಸಾಮಾಜಿಕ ಜಾಲತಾಣ ಗಳಲ್ಲಿ ಕರೆಕೊಟ್ಟಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎಂದು ಸುಂದರ ಮಾಸ್ತರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕವಾಗಿ ರಾಷ್ಟ್ರ ನಾಯಕ, ವಿಶ್ವರತ್ನ, ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಮತ್ತು ದಲಿತರು ದನ, ಕೋಣದ ಮಾಂಸ ತಿಂದು ಸ್ಮಶಾನದಲ್ಲಿ ಮಲಗುವವರು ಎಂದು ಸಾರ್ವಜನಿಕವಾಗಿ ನಿಂದನೆ ಮಾಡಿದ ಉಮೇಶ ನಾಯ್ಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಇದರ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News