ಸಾಮೂಹಿಕ ಉಚಿತ ಮುಂಜಿ (ಸುನ್ನತ್) ಕಾರ್ಯಕ್ರಮ

Update: 2024-10-14 13:34 GMT

ಕಾಪು, ಅ.14: ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲೆಯ ವತಿಯಿಂದ ನಡೆದ ಸಾಮೂಹಿಕ ಉಚಿತ ಮುಂಜಿ(ಸುನ್ನತ್) ಕಾರ್ಯಕ್ರಮವನ್ನು ಸೋಮವಾರ ಕೊಪ್ಪಲಂಗಡಿ ಕಮ್ಯುನಿಟಿ ಹಾಲ್‌ನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಒಕ್ಕೂಟದ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಮೌಲಾನಾ ಝಮೀರ್ ಅಹ್ಮದ್ ರಶಾದಿ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಜಿಲ್ಲಾಧ್ಯಕ್ಷ ಮುಷ್ತಾಕ್ ಅಹ್ಮದ್ ಬೆಳ್ವೆ ವಹಿಸಿದ್ದರು. ಜಮೀಯ್ಯತುಲ್ ಫಲಾಹ್ ಕಾಪು ತಾಲೂಕು ಅಧ್ಯಕ್ಷ ಶಬೀ ಅಹಮ್ಮದ್ ಖಾಝಿ ಮತ್ತು ಒಕ್ಕೂಟದ ಕುಂದಾಪುರ ತಾಲೂಕು ಅಧ್ಯಕ್ಷ ದಸ್ತಗೀರ್ ಸಾಹೇಬ್ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಒಕ್ಕೂಟದ ಕೇಂದ್ರ ಸಮಿತಿಯ ಕೋಶಾಧಿಕಾರಿ ಪೀರ್ ಮುಹಮ್ಮದ್, ಜಿಲ್ಲಾ ಕ್ರೀಡಾ ಸಂಯೋಜಕ ಟಿ.ಎಂ.ಜಾಫರುಲ್ಲಾ ಹೂಡೆ, ಅಬೂ ಮುಹಮ್ಮದ್ ಕುಂದಾಪುರ, ನಿಹಾರ್ ಕುಂದಾಪುರ, ಸಿದ್ದೀಕ್ ಅಡ್ಡೂರು, ಫಾರೂಕ್, ಯು.ಎ.ರಶೀದ್, ಭಾಗವಹಿಸಿದ್ದರು. ಕಾರ್ಯಕ್ರಮ ನಿರ್ದೇಶಕರಾದ ಮುಹಮ್ಮದ್ ಇರ್ಫಾನ್, ಮುಹಮ್ಮದ್ ಇರ್ಷಾದ್, ಆಸೀಫ್ ಕಾಪು ಉಪಸ್ಥಿತರಿದ್ದರು.

ಒಕ್ಕೂಟದ ಕಾಪು ತಾಲೂಕು ಅಧ್ಯಕ್ಷ ಅಶ್ರಫ್ ಪಡುಬಿದ್ರಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹೀರ್ ನಾಖುದ ವಂದಿಸಿದರು. ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಅಬ್ದುಲ್ ಹಮೀದ್ ಯೂಸುಫ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News