ನಟ ಮಂಡ್ಯ ರಮೇಶ್‌ಗೆ ಪಂಚಮಿ ಪುರಸ್ಕಾರ

Update: 2024-10-14 13:46 GMT

ಉಡುಪಿ, ಅ.14: ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ನೀಡುವ ಪಂಚಮಿ ಪುರಸ್ಕಾರ-2025ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರಸ್ಕಾರವು ಗೌರವ ಧನ ಒಂದು ಲಕ್ಷ ರೂ.ನೊಂದಿಗೆ ಪ್ರಶಸ್ತಿ ಪತ್ರ, ಪದಕ ಒಳಗೊಂಡಿದೆ. ಜನವರಿ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಉಪಾಧ್ಯಕ್ಷರಾದ ಮರವಂತೆ ನಾಗರಾಜ್ ಹೆಬ್ಬಾರ್, ವಿಘ್ನೇಶ್ವರ ಅಡಿಗ, ಪುರಸ್ಕಾರ ಸಮಿತಿಯ ಸಂಯೋಜಕ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News