ಯುವಕವಿ ಗೋಷ್ಠಿ: ಕವಿತೆಗಳ ಆಹ್ವಾನ

Update: 2024-10-14 14:34 GMT

ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ಕರ್ನಾಟಕ ಸಂಭ್ರಮ-50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು ‘ಯುವ ಕವಿಗೋಷ್ಠಿ’ಗಳನ್ನು ಆಯೋಜಿಸಲಾಗಿದೆ.

ಇದರಲ್ಲಿ ಭಾಗವಹಿಸಲು ಆಸಕ್ತ 20ರಿಂದ 40 ವರ್ಷ ವಯಸ್ಸಿನ ಯುವ ಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ ೩ ಕವಿತೆಗಳನ್ನು ಕಳುಹಿಸಿಕೊಡಬಹುದಾಗಿದೆ.

ಕವಿತೆಗಳನ್ನು ಕಳುಹಿಸಲು ಅಕ್ಟೋಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಳಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲತಾಣವಾದ -http://karnatakasahithyaacademy.org -ಅನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News