ಪ್ರತ್ಯೇಕ ಪ್ರಕರಣ: ನಾಲ್ವರ ಆತ್ಮಹತ್ಯೆ

Update: 2024-10-16 15:42 GMT

ಕುಂದಾಪುರ, ಅ.16: ಅನಾರೋಗ್ಯದಿಂದ ಬಳಲುತ್ತಿದ್ದ ಬಸ್ರೂರು ಗ್ರಾಮದ ಕಲ್ಯಾಣಿ(82) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಅ.15ರಂದು ಮದ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮಯ ಮನೆ ಸಮೀಪದ ವೆಂಕಟರಮಣ ದೇವಸ್ಥಾನದ ಹಿಂಬದಿಯ ದೇವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ವೈಯಕ್ತಿಕ ಕಾರಣದಿಂದ ಮನನೊಂದ ಮಲ್ಲಾರು ಗ್ರಾಮದ ನಾಗವೇಣಿ ಎಂಬವರ ಮಗ ಸುನೀಲ್ (32) ಎಂಬವರು ಅ.15ರಂದು ಮಧ್ಯಾಹ್ನ ಮನೆಯ ಹಾಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ತಾಯಿಯ ಅನಾರೋಗ್ಯದ ಚಿಂತೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕಂದಾವರ ಗ್ರಾಮದ ನವೀನ ಡಿಸೋಜ(42) ಎಂಬವರು ಅ.15ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ: ಮಗನ ಅಕಸ್ಮಿಕ ಸಾವಿನಿಂದ ಖಿನ್ನತೆಗೆ ಒಳಗಾಗಿ ಅ.14ರಂದು ಸಂಜೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದ ಆವರ್ಸೆ ಗ್ರಾಮದ ಕಿರಾಡಿ ಬೆಳ್ಳ(65) ಎಂಬವರು ಅ.15ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News