ಪ್ರತ್ಯೇಕ ಪ್ರಕರಣ: ಇಬ್ಬರು ಮಹಿಳೆಯರ ಆತ್ಮಹತ್ಯೆ

Update: 2024-10-21 16:35 GMT

ಶಂಕರನಾರಾಯಣ, ಅ.21: ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅ.12ರಂದು ಮಧ್ಯಾಹ್ನ ಮನೆಯಲ್ಲಿ ಇಲಿ ಪಾಷಣ ತಿಂದು ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥರಾಗಿದ್ದ ಸಿದ್ದಾಪುರ ಗ್ರಾಮದ ಹರ್ಕೆಬಾಳು ನಿವಾಸಿ ಸಾದಮ್ಮ (62) ಎಂಬವರು ಅ.21ರಂದು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಅ.21ರಂದು ಬೆಳಗ್ಗೆ ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ, ಅ.21: ಯಡ್ತಾಡಿ ಗ್ರಾಮದ ಹರ್ಷ ಎಂಬವರ ಎಂಬವರ ಪತ್ನಿ ಶಾಲಿನಿ(34) ಎಂಬವರು ಅ.19ರಂದು ತನ್ನ ಪತಿಗೆ ಮೊಬೈಲ್ ಸಂದೇಶ ಕಳುಹಿಸಿ ಮನೆ ಮಹಡಿಯ ರೂಮಿನಲ್ಲಿ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News