ಟ್ಯಾಕ್ಟರ್ ಪಲ್ಟಿ: ಚಾಲಕ ಮೃತ್ಯು

Update: 2024-11-21 16:21 GMT

ಕೊಲ್ಲೂರು, ನ.21: ಟ್ಯಾಕ್ಟರೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಕೆರಾಡಿ ಗ್ರಾಮದ ಅರೆಕಲ್ಲು ಎಂಬಲ್ಲಿ ನ.19ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಮಂಜುನಾಥ(37) ಎಂದು ಗುರುತಿಸಲಾಗಿದೆ. ಕೆರಾಡಿ ಕಡೆಯಿಂದ ಚಿತ್ತೂರು ಪೆಟ್ರೋಲ್ ಬಂಕ್ ಕಡೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್, ನಿಯಂತ್ರಣ ತಪ್ಪಿರಸ್ತೆಯ ಬದಿಯ ತಗ್ಗು ಜಾಗದಲ್ಲಿ ಅಡ್ಡ ಬಿತ್ತೆನ್ನಲಾಗಿದೆ. ಇದರಿದ ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ವೇಳೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News