ಪತ್ರಿಕೋದ್ಯಮದಲ್ಲಿ ಛಾಯಾಚಿತ್ರಗಳ ಪಾತ್ರ ಕುರಿತ ಕಾರ್ಯಾಗಾರ

ಉಡುಪಿ : ಉಡುಪಿ ಶ್ರೀಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಕನ್ನಡ ವಿಭಾಗ ಹಾಗೂ ಎನ್ಎಸ್ಎಸ್ ಸಹ ಯೋಗದೊಂದಿಗೆ ಪತ್ರಿಕೋದ್ಯಮದಲ್ಲಿ ಛಾಯಾಚಿತ್ರಗಳ ಪಾತ್ರ ಎಂಬ ವಿಷಯದ ಕುರಿತು ಕಾರ್ಯಾ ಗಾರವನ್ನು ಶನಿವಾರ ಆಯೋಜಿಸಲಾಗಿತ್ತು.
ಛಾಯಾಚಿತ್ರ ಪತ್ರಕರ್ತ ಜನಾರ್ದನ ಕೊಡವೂರು ಮಾತನಾಡಿ, ದಿನ ನಿತ್ಯದ ಆಗುಹೋಗುಗಳನ್ನು ತಮ್ಮ ಕ್ಯಾಮರಾ ಕಣ್ಣೊಳಗೆ ಸಮರ್ಪಕವಾಗಿ ಹಿಡಿದಿಡುವ ಸಾಮರ್ಥ್ಯವಿರುವುದು ಛಾಯಾಗ್ರಾಹಕನಿಗೆ ಮಾತ್ರ. ಇಂದು ವಿಶಾಲವಾದ ಜಗತ್ತಿನ ಅತಿದೊಡ್ಡ ಜಾಲವೆನಿಸಿದ ಛಾಯಾಚಿತ್ರಗ್ರಹಣದಲ್ಲಿ ಯುವ ಮನಸ್ಸುಗಳಿಗೆ ವಿಪುಲ ಅವಕಾಶಗಳಿವೆ. ಪತ್ರಿಕೋದ್ಯಮ ಸೇರಿದಂತೆ ಮಾಧ್ಯಮದ ಎಲ್ಲಾ ಕ್ಷೇತ್ರಗಳಲ್ಲಿಯೂ ಛಾಯಾ ಗ್ರಹಣಕ್ಕೆ ಇರುವ ಸವಾಲುಗಳನ್ನು ಗಮನಿಸಿಕೊಂಡು ವಿದ್ಯಾರ್ಥಿಗಳು ಈ ಕ್ಷೇತ್ರದಲ್ಲಿ ನೆಲೆಯೂರುವ ಪ್ರಯತ್ನ ಮಾಡಬೇಕಾಗಿದೆ ಎಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸುಕನ್ಯಾ ಮೇರಿ ಜೆ. ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಪ್ರಜ್ಞಾ ಮಾರ್ಪಳ್ಳಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಎನ್ಎಸ್ಎಸ್ ಘಟಕದ ಯೋಜನಾಧಿಕಾರಿ ಚಿರಂಜನ್ ಕೆ.ಶೇರಿಗಾರ್ ವಂದಿಸಿದರು.