ಕುಂದಾಪುರ ತಾಲೂಕು ಆಫೀಸ್ಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ
Update: 2025-04-16 16:22 IST

ಕುಂದಾಪುರ: ಇಲ್ಲಿನ ಪ್ರಜಾಸೌಧದಲ್ಲಿರುವ ತಾಲೂಕು ಕಚೇರಿಗೆ ಲೋಕಾಯುಕ್ತ ಪೊಲೀಸರು ಬುಧವಾರದಂದು ದಿಢೀರ್ ಭೇಟಿ ನೀಡಿ, ಕೆಲವೊಂದು ವಿಚಾರಗಳ ಬಗ್ಗೆ ಪರಿಶೀಲಿಸಿ ವಿಚಾರಣೆ ನಡೆಸಿದರು.
ತಾಲೂಕು ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ, ಜನರ ಕೆಲಸ ಮಾಡಿಕೊಡುವಲ್ಲಿ ವಿಳಂಬ ಮೊದಲಾದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಉಡುಪಿ ಲೋಕಾಯುಕ್ತ ಇನ್ಸ್ಪೆಕ್ಟರ್ ರಾಜೇಂದ್ರ ನಾಯ್ಕ್ ಎಂ.ಎನ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ರವೀಂದ್ರ ಗಾಣಿಗ, ರಮೇಶ್, ರಾಘವೇಂದ್ರ, ಸೂರಜ್, ಮಲ್ಲಿಕಾ, ಪುಷ್ಪವತಿ ಮೊದಲಾದವರಿದ್ದರು.