ಗ್ರಾಪಂ ಉಪಾಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿಗಳ ನೇಮಕ

Update: 2025-04-16 21:36 IST
  • whatsapp icon

ಉಡುಪಿ, ಎ.16: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಪಂನ ಮುಂದಿನ ಅವಧಿಗೆ ಉಪಾಧ್ಯಕ್ಷರ ಸ್ಥಾನವನ್ನು (ಮೀಸಲಾತಿ-ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬ್ರಹ್ಮಾವರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್ ಅವರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಇವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 45 ಹಾಗೂ (ಗ್ರಾಮ ಪಂಚಾ ಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995ರ ನಿಯಮ 4ರಿಂದ 11ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಉಪಾಧ್ಯಕ್ಷರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News