ಸಂಘಟಿತವಾಗಿ ಸರಕಾರಿ ಶಾಲೆ ಉಳಿಸೋಣ: ಶಾಸಕ ಗಂಟಿಹೊಳೆ

Update: 2025-04-24 20:10 IST
ಸಂಘಟಿತವಾಗಿ ಸರಕಾರಿ ಶಾಲೆ ಉಳಿಸೋಣ: ಶಾಸಕ ಗಂಟಿಹೊಳೆ

ಸಾಂದರ್ಭಿಕ ಚಿತ್ರ

  • whatsapp icon

ಬೈಂದೂರು, ಎ.24: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಬಗ್ಗೆ ವಿಶೇಷ ಯೋಜನೆಯೊಂದನ್ನು ಶಾಸಕ ಗುರುರಾಜ್ ಗಂಟಿಹೊಳೆ ರೂಪಿಸಿದ್ದು, ಇದರ ಸಮಾಲೋಚನಾ ಸಭೆ ಇಲ್ಲಿ ನಡೆದಿಯಿತು. ಸರಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಅವರು ಕರೆ ನೀಡಿದರು.

ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ ‘300 ಟ್ರೀಸ್’ ಸಮಿತಿ ರಚನೆ ಹಾಗೂ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಳವಡಿಸುವ ಬಗ್ಗೆ ಶಿಕ್ಷಣ ಪ್ರೇಮಿಗಳು, ಅಧ್ಯಾಪಕರು, ದಾನಿಗಳು ಹಾಗೂ ಕಾರ್ಯಕರ್ತರಿಂದ ಸಲಹೆಗಳನ್ನು ಸ್ವೀಕರಿಸಿದರು.

ಬೆಂಗಳೂರಿನಲ್ಲಿ ನೆಲೆಸಿರುವ ಕಾರ್ಯಕರ್ತರ ಜೊತೆ ಸಮಾಲೋಚನೆ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಿದ್ದು, ಸಂಘಟಿತವಾಗಿ ನಾವೆಲ್ಲರೂ ಜೊತೆಯಾಗಿ ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡಿದರೆ ಸರಕಾರಿ ಶಾಲೆಗಳು ಗತವೈಭವ ಕಾಣುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಗಂಟಿಹೊಳೆ ಅಭಿಪ್ರಾಯಪಟ್ಟರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News