ವಿದ್ಯಾರ್ಥಿಗಳು ಸಮಾಜದ ಸಾಂಸ್ಕೃತಿಕ ರಾಯಭಾರಿಗಳು: ಯಶ್‌ಪಾಲ್ ಸುವರ್ಣ

Update: 2025-04-29 19:53 IST
ವಿದ್ಯಾರ್ಥಿಗಳು ಸಮಾಜದ ಸಾಂಸ್ಕೃತಿಕ ರಾಯಭಾರಿಗಳು: ಯಶ್‌ಪಾಲ್ ಸುವರ್ಣ
  • whatsapp icon

ಉಡುಪಿ, ಎ.29: ದೇಶದ ಯುವ ಶಕ್ತಿ ಶೈಕ್ಷಣಿಕಣಿಕವಾಗಿ ಸದೃಢವಾಗುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ನಮ್ಮ ಸಮಾಜದ ಸಾಂಸ್ಕೃತಿಕ ರಾಯಭಾರಿ ಗಳು. ಸಂಸ್ಕೃತಿಯನ್ನು ತಿಳಿದುಕೊಂಡು ಪಾಲಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ವಿದ್ಯಾರ್ಥಿಗಳು ಬಹು ಮುಖ್ಯಪಾತ್ರ ವಹಿಸುತ್ತಾರೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದ್ದಾರೆ.

ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತುತಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಾಲೇಜು ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಯಾಗಿ ಅಜೆಕಾರು ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಮಾತನಾಡಿ, ಕಾಲೇಜು ಶಿಕ್ಷಣ ವಿದ್ಯಾರ್ಥಿ ಜೀವನದ ಸುವರ್ಣಕಾಲ. ಕೇವಲ ಕ್ಷಣಿಕ ಸಂತೋಷ ನೀಡುವ ವಿಷಯಗಳಿಗೆ ಮಾರು ಹೋಗದೆ, ತಂದೆ ತಾಯಿಯ ತ್ಯಾಗ ಮತ್ತು ಪರಿಶ್ರಮವನ್ನು ಅರಿತುಕೊಂಡು ಭವಿಷ್ಯದ ಬದುಕನ್ನು ಭದ್ರವಾಗಿ ಕಟ್ಟಿಕೊಳ್ಳಲು ಪ್ರಯತ್ನಿಸ ಬೇಕು. ಸಾಹಿತ್ಯದ ಆಸಕಿತಿಯು ಒಬ್ಬ ವಿದ್ಯಾರ್ಥಿಗೆ ತಮ್ಮ ಸಾಮಾಜಿಕ ಜೀವನ ಮತ್ತು ಮೌಲ್ಯಗಳನ್ನು ಅರ್ಥಮಾಡಿಕೊಂಡು ಬದುಕಲು ಸಹಾಯವಾಗುತ್ತದೆ ಎಂದರು.

ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ಪ್ರಾದೇಶಿಕ ಕಛೇರಿಯ ಮಾನ್ಯ ಜಂಟಿ ನಿರ್ದೇಶಕರು ಪ್ರೊ.ಕವಿತಾ ಕೆ.ಆರ್. ಮಾತನಾಡಿ ಇಂದು ಸರಕಾರಿ ಕಾಲೇಜುಗಳು ಉತತಿಮ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವಲ್ಲಿ ಯಶಸ್ಸನ್ನು ಕಾಣುತಿತಿವೆ. ಸರಕಾರಿ ಕಾಲೇಜುಗಳು ಅತೀ ಕಡಿಮೆ ಕಾಲೇಜು ಪ್ರವೇಶ ಶುಲ್ಕ ಹೊಂದಿದ್ದು, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಮತುತಿ ಪೋಷಕರು ಮಾಡಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿ ಶ್ಯಾಮಿಲಿ ನವೀನ್ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಧರ್ ಪ್ರಸಾದ್ ಕೆ. ವಾರ್ಷಿಕ ವರದಿ ಮಂಡಿಸಿದರು. ಸೇವಾ ನಿವೃತ್ತಿ ಹೊಂದಲ್ಲಿರುವ ಹಿರಿಯ ಉಪನ್ಯಾಸಕಿ ಗೌರಿ ಎಸ್.ಭಟ್ ಅವರನ್ನು ಸನ್ಮಾನಿಸಲಾಯಿತು. ವಾಣಿಜ್ಯ ನಿಕಾಯದ ಡೀನ್ ಪ್ರೊ.ಗೌರಿ ಎಸ್.ಭಟ್, ವಿಜ್ಞಾನ ನಿಕಾಯದ ಡೀನ್ ಹಾಗೂ ಐಕ್ಯೂಎಸಿ ಸಂಚಾಲಕಿ ಪ್ರೊ.ಶ್ರೀಮತಿ ಅಡಿಗ, ಸಾಂಸ್ಕೃತಿಕ ಸಂಚಾಲಕಿ ರೇಖಾ ಎಸ್.ಎನ್., ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಮಚಂದ್ರ ಪಾಟ್ಕರ್ ಮೊದಲಾದವರು ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಮತ್ತು ಕಲಾ ನಿಕಾಯದ ಡೀನ್ ಪ್ರೊ.ನಿಕೇತನಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಪ್ರಸನ್ನ ಪಿ.ಬಿ. ಕಾರ್ಯಕ್ರಮ ನಿರೂಪಿಸಿದರು. ಸ್ನಾತಕೋತ್ತರ ವಿಭಾಗದ ಸಂಚಾಲಕ ರವಿ ಪ್ರಸಾದ್ ಕೆ.ಜಿ. ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News