ಚೈತ್ರಾ ಪ್ರಕರಣಕ್ಕೆ ಸಂಬಂಧ ಇಲ್ಲ, ಯಾವುದೇ ವಿಚಾರಣೆಗೂ ಸಿದ್ಧ: ಮಾಜಿ ಸಚಿವ ಸುನೀಲ್ ಕುಮಾರ್

Update: 2023-09-16 15:24 GMT

ಸುನೀಲ್ ಕುಮಾರ್

ಉಡುಪಿ, ಸೆ.16: ಚೈತ್ರಾ ಕುಂದಾಪುರ ಕೋಟಿ ವಂಚನೆ ಪ್ರಕರಣದಲ್ಲಿ ನನಗೆ ಯಾವುದೇ ಸಂಬಂಧ ಇಲ್ಲ. ಈ ಕುರಿತಂತೆ ನಾನು ಯಾವ ವಿಚಾರಣೆಗೂ ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೆಸರಿನಲ್ಲಿ ಯಾರಿಗೆ ಯಾರು ಕೂಡ ಮೋಸ ಮಾಡಬಾರದು. ಸಿಸಿಬಿ ಅಧಿಕಾರಿಗಳು ಈಗಾಗಲೇ ಬಂಧಿಸಿರುವ ಯಾರ ಮುಖ ಕೂಡ ನನಗೆ ಪರಿಚಯ ಇಲ್ಲ. ನಾನು ಯಾರ ಜೊತೆಗೆ ನಾನು ಫೋನಲ್ಲಿ ಮಾತಾಡಿ ಕೂಡ ಇಲ್ಲ ಎಂದು ಸ್ಪಷ್ಟಪಡಿಸಿದರು.

ಆಕಸ್ಮಿಕವಾಗಿ ಶುಭ ಸಮಾರಂಭ ಕಾರ್ಯಕ್ರಮಗಳಲ್ಲೂ ಕೂಡ ಇವರನ್ನು ನಾನು ಭೇಟಿ ಆಗಿಲ್ಲ. ಬಿಜೆಪಿಯಲ್ಲಿ ಹಣದಿಂದ ಟಿಕೆಟ್ ಸಿಗುತ್ತ ಎಂಬುದು ಕೇವಲ ಭ್ರಮೆ. ಹಣದಿಂದ ಟಿಕೆಟ್ ಸಿಗುತ್ತಿದ್ದರೆ ನಾನು ನಾಲ್ಕು ಬಾರಿ ಗೆದ್ದು ಬರಲು ಸಾಧ್ಯ ಆಗುತ್ತಿರಲಿಲ್ಲ. ರಾಜಕಾರಣಿಗಳ ಹೆಸರು ಹೇಳಿ ಹಣದ ದುರುಪಯೋಗ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.

ಈ ಘಟನೆಯನ್ನು ಪೊಲೀಸರು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಈ ಮೂಲಕ ಇಂತಹ ಘಟನೆ ಅಂತ್ಯ ಆಗಬೇಕು. ಆ ನಿಟ್ಟಿನಲ್ಲಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು. ಘಟನೆಯ ಹಿಂದೆ ಯಾರಿದ್ದಾರೆ, ಯಾರು ದುರುಪಯೋಗ ಮಾಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ, ಅವರನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕು. ಬಿಜೆಪಿ ಹೆಸರು ಹೇಳಿ, ಬಿಜೆಪಿಗೆ ಅವಮಾನ ಮಾಡುವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News