ಓಮ್ನಿ ಕಾರು- ಬೈಕ್ ಢಿಕ್ಕಿ: ಸವಾರ ಮೃತ್ಯು

Update: 2023-10-24 15:48 GMT

ಕುಂದಾಪುರ : ಓಮ್ನಿ ಕಾರೊಂದು ಸೈಕಲ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ಮೂವರು ಗಾಯ ಗೊಂಡ ಘಟನೆ ಅ.23ರಂದು ರಾತ್ರಿ ವೇಳೆ ಬಸ್ರೂರು ಶಾರದಾ ಕಾಲೇಜು ಎದುರು ಕುಂದಾಪುರ - ಸಿದ್ದಾಪುರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಬೈಕ್ ಸವಾರ ಅಣ್ಣಯ್ಯ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಗಾಯಾಗೊಂಡ ಕಾರು ಚಾಲಕ ಜೈರುದ್ದಿನ್ ಹಾಗೂ ಕಾರಿನಲ್ಲಿದ್ದ ನೂರುಲ್ಲಾ ಅಮೀನ್, ಖಾದೀರ್ ಭಾಷ ಎಂಬವರು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಸೈಕಲ್‌ಗೆ ಕುಂದಾಪುರ ಕಡೆಯಿಂದ ಕಂಡ್ಲೂರು ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬಳಿಕ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿತ್ತು ಎಂದು ತಿಳಿದುಬಂದಿದೆ.

ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ಅಣ್ಣಯ್ಯ ಶೆಟ್ಟಿಗಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅಣ್ಣಯ್ಯ ಶೆಟ್ಟಿಗಾರ್ ಮೃತಪಟ್ಟಿರುವುದಾಗಿ ತಿಳಿಸಿ ದರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News