ನ. 7ರಂದು ಉಡುಪಿ ಜಿಲ್ಲೆಯ ವಿವಿದೆಡೆ ವಿದ್ಯುತ್ ವ್ಯತ್ಯಯ

Update: 2023-11-06 16:24 GMT

ಉಡುಪಿ, ನ.6: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 7ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

110/11 ಕೆವಿ ನಾವುಂದ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ದಿನದಂದು 110/11 ಕೆವಿ ನಾವುಂದ ವಿದ್ಯುತ್ ಉಪಕೇಂದ್ರ ಹಾಗೂ 33/11 ಕೆವಿ ಬೈಂದೂರು ಮತ್ತು ಕೊಲ್ಲೂರು ಉಪ ಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರುಗಳಾದ ಹೇರೂರು, ಮರವಂತೆ, ಕಂಬದಕೋಣೆ, ಕಿರಿಮಂಜೇಶ್ವರ, ಆಲೂರು, ಬಡಾಕೆರೆ ಶಿರೂರು, ಉಪ್ಪುಂದ, ಗಂಗನಾಡು, ಬೈಂದೂರು, ತೂದಳ್ಳಿ, ತಗ್ಗರ್ಸೆ, ಯಳಜಿತ್, ಮುದೂರು ಹಾಗೂ ಕೊಲ್ಲೂರು ಫೀಡರುಗಳಲ್ಲಿ ಹೇರಂಜಾಲು, ಕಂಬದಕೋಣೆ, ಹೇರೂರು, ಕಾಲ್ತೋಡು, ಉಳ್ಳೂರು-11, ಆಲೂರು, ಹಕ್ಲಾಡಿ, ನಾಡ, ಹರ್ಕೂರು, ನೂಜಾಡಿ, ನಾವುಂದ, ಸೇನಾಪುರ, ಬಡಾಕೆರೆ, ಕುಂದಬಾರಂದಾಡಿ, ಹಡವು, ತ್ರಾಸಿ, ಹೊಸಾಡು, ಕೊಯಾನಗರ, ಮರವಂತೆ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್ಕೊಡ್ಲು, ಹಾಲ್ಕಲ್, ದೋಣಿಗದ್ದೆ, ದಳಿ, ಮಾನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್ ಬೀಸಿನಪಾರೆ, ಸೆಳ್ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು ಬೈಂದೂರು, ಶಿರೂರು, ಯಡ್ತರೆ, ತಗ್ಗರ್ಸೆ, ಬಿಜೂರು, ಉಪ್ಪುಂದ, ಪಡುವರಿ, ನಂದನವನ, ಕೆರ್ಗಾಲ್, ಕಂಬದಕೋಣೆ, ಯಳಜಿತ್, ಗೋಳಿಹೊಳೆ ಹಾಗೂ ಕೊಲ್ಲೂರು ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

110/11 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಂದಳಿಕೆ ಮತ್ತು ಬೆಳ್ಮಣ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಮಾನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33/11 ಕೆವಿ ಹೆಬ್ರಿ ಉಪದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆವಿ ಮುದ್ರಾಡಿ, ಕಳ್ತೂರು, ವಾಟರ್ ಸಫ್ಲೈ ಪೀಡರ್‌ನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮುದ್ರಾಡಿ, ಮುನಿಯಾಲು, ವರಂಗ, ಮುಟ್ಲುಪಾಡಿ, ಪಡುಕುಡೂರು, ಕಾಡುಹೊಳೆ, ಮಂಡಾಡಿಜೆಡ್ಡು, ಕಳ್ತೂರು, ಸಂತೆಕಟ್ಟೆ, ಕರ್ಜೆ, ಕುರ್ಪಾಡಿ, ಕೆರೆಬೆಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 33/11 ಕೆವಿ ಹೆಬ್ರಿ ಉಪವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆವಿ ಮುದ್ರಾಡಿ, ಕಳ್ತೂರು, ವಾಟರ್ ಸಫ್ಲೈ ಪೀಡರ್‌ನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮುದ್ರಾಡಿ, ಮುನಿಯಾಲು, ವರಂಗ, ಮುಟ್ಲುಪಾಡಿ, ಪಡುಕುಡೂರು, ಕಾಡುಹೊಳೆ, ಮಂಡಾಡಿಜೆಡ್ಡು, ಕಳ್ತೂರು, ಸಂತೆಕಟ್ಟೆ, ಕರ್ಜೆ, ಕುರ್ಪಾಡಿ, ಕೆರೆಬೆಟ್ಟು, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಭಂಡಾರಿ ಪವರ್ ಲೈನ್, ರಾಯಲ್ ಎಂಬೆಸಿ ಮತ್ತು ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿ ಕೊಂಡಿರುವುದರಿಂದ ಇಂಡಸ್ಟ್ರಿಯಲ್ ಏರಿಯಾ, ರಾಯಲ್ ಎಂಬೆಸಿ, ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9:30ರಿಂದ ಸಂಜೆ 5 ರವರೆಗೆ ಹಾಗೂ 110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬ್ರಹ್ಮಾವರ, ಮಾಬುಕಳ, ಉಪ್ಪೂರು, ಚೇರ್ಕಾಡಿ, ಕೊಕ್ಕರ್ಣೆ ಫೀಡರ್ ಮಾರ್ಗದಲ್ಲಿ ಹಾಗೂ 220/110/11ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹೆಗ್ಗುಂಜೆ ಫೀಡರ್ ಮಾರ್ಗದಲ್ಲಿ ಮಾರ್ಗ ವಿಸ್ತರಣೆ ಕಾಮಗಾರಿ, ತುರ್ತು ನಿರ್ವಹಣೆ ಕಾಮಗಾರಿ, ವ್ಯವಸ್ಥೆ ಸುಧಾರಣೆ ಕಾಮಗಾರಿ ಯೋಜನೆಯಡಿ ಹೆಚ್ಚುವರಿ ಪರಿವರ್ತಕ ಅಳವಡಿಕೆ, ಎಲ್.ಟಿ ವಾಹಕ ಬದಲಾವಣೆ, ಪರಿವರ್ತಕ ಕೇಂದ್ರಗಳ ಬದಲಾವಣೆ ಮತ್ತು ಜಿಓಎಸ್ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಂದಾಡಿ, ಬೇಳೂರು ಜೆಡ್ಡು, ಬ್ರಹ್ಮಾವರ, ರಥಬೀದಿ, ಚಾಂತಾರು, ವಾರಂಬಳ್ಳಿ, ಕುಮ್ರಗೋಡು, ಉಪ್ಪಿನಕೋಟೆ, ಬಾಳ್ತಾರು, ಸೂಲ್ಕುದ್ರು, ಹೈರಾಬೆಟ್ಟು, ಕೆ.ಜಿ.ರೋಡ್, ಸಾಲ್ಮರ, ಮಾಯಾಡಿ, ಅಮ್ಮುಂಜೆ, ಹೇರೂರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್, ಕಾಡೂರು, ಮೊಗವೀರಪೇಟೆ, ಕೊಕ್ಕರ್ಣೆ, ಕೆಂಜೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

33/11ಕೆ ಶಿರ್ವ ಎಂ.ಯು.ಎಸ್.ಎಸ್‌ನಲ್ಲಿ ಹೊರಡುವ 11ಕೆವಿ ಶಿರ್ವ ಮತ್ತು ಮುದರಂಗಡಿ ಫೀಡರಿನಲ್ಲಿ ಹೊಸ ಕುರ್ಕಾಲು ಫೀಡರ್ ನಿರ್ಮಾಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ 11ಕೆವಿ ಶಿರ್ವ ಹಾಗೂ ಮುದರಂಗಡಿ ಫೀಡರ್ ಮಾರ್ಗದಲ್ಲಿ ಶಿರ್ವ ಗ್ರಾಮ, ಮಟ್ಟಾರು ಗ್ರಾಮ, ಪದವು ಪಾಂಬೂರು, ಪಂಜಿಮಾರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು ಗ್ರಾಮ, ಚಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News