ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಅಧ್ಯಕ್ಷರಾಗಿ ಪ್ರೊ.ಶಂಕರ್ ಪುನರಾಯ್ಕೆ

Update: 2024-08-21 14:58 GMT

ಉಡುಪಿ: ಉಡುಪಿಯ ಸಾಂಸ್ಕೃತಿಕ ಸಂಘಟನೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷರಾಗಿ ಪ್ರೊ. ಶಂಕರ್ ಪುನರಾಯ್ಕೆಗೊಂಡಿದ್ದಾರೆ.

ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಸಂಧ್ಯಾ ಶೆಣೈ, ಜೀವನ್‌ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಮನೋಹರ್ ನಾಯಕ್, ಮಧುಸೂದನ್ ಹೇರೂರು, ಸುಗುಣ ಸುವರ್ಣ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಜಯಕರ ಶೆಟ್ಟಿ ಇಂದ್ರಾಳಿ, ರವೀಂದ್ರ ಪೂಜಾರಿ ತೆಳ್ಳಾರು, ರಾಜಗೋಪಾಲ್ ಬಲ್ಲಾಳ, ಡಾ.ಸುರೇಶ್ ಶೆಣೈ, ಡಾ. ಹರೀಶ್ಚಂದ್ರ, ಡಾ. ವಿರೂಪಾಕ್ಷ ದೇವರಮನೆ, ಡಾ. ವಿಜಯೇಂದ್ರ ವಸಂತ್, ಜನಾರ್ದನ ಕೊಡವೂರು, ಮನೋರ್ರ್ ಶೆಟ್ಟಿ ತೋನ್ಸೆ ನೇಮಕಗೊಂಡರು.

ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪಾ ಜೋಶಿ, ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ಧನ್, ಜನಾರ್ದನ ಹಾವಂಜೆ, ಕೋಶಾಧಿಕಾರಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ ಶಶಿರಾಜ್ ಕಾವೂರು ಹಾಗೂ ಸಂಚಾಲಕರಾಗಿ ರವಿರಾಜ್ ಹೆಚ್. ಪಿ ಆಯ್ಕೆಗೊಂಡರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News