ರಸ್ತೆ ಅಪಘಾತದ ಗಾಯಾಳು ಮೃತ್ಯು

Update: 2023-09-05 16:44 GMT

ಕುಂದಾಪುರ, ಸೆ.5: ಅಪಘಾತದಿಂದ ಗಂಭೀರವಾಗಿ ಗಾಯಗೊಂಡು ಕೋಮ ಸ್ಥಿತಿಯಲ್ಲಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮನೆ ಯಲ್ಲಿಯೇ ಮೃತಪಟ್ಟ ಘಟನೆ ಕೆಂಚನೂರು ಶಾಲೆಯ ಬಳಿ ಸೆ.4ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಕೆಂಚನೂರಿನ ಲಕ್ಷ್ಮೀಕಾಂತ ಶೆಟ್ಟಿ ಎಂಬವರ ಮಗ ಸುಮಂತ್ ಶೆಟ್ಟಿ (24) ಎಂದು ಗುರುತಿಸಲಾಗಿದೆ. ಮಾ.8ರಂದು ಕೆಂಚನೂರು ಗ್ರಾಮದ ಪೆಟ್ರೋಲ್ ಬಂಕ್ ಎದುರು ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸುಮಂತ್ ಶೆಟ್ಟಿ ಕೋಮಾ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಎ.3ರಂದು ಅವರನ್ನು ಕೋಮಾ ಸ್ಥಿತಿಯಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮನೆಗೆ ಕರೆದುಕೊಂಡು ಬಂದಿದ್ದು, ಸೆ.4ರಂದು ರಾತ್ರಿ ಚಿಕಿತ್ಸೆ ಫಲಕಾರಿ ಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News