ರಸ್ತೆ ಅಪಘಾತ: ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ ಟೂರಿಸ್ಟ್ ಚಾಲಕರು

Update: 2024-08-13 16:55 GMT

ಉಡುಪಿ, ಆ.13: ಅಪಘಾತದ ಗಾಯಾಳುಗಳನ್ನು ಟೂರಿಸ್ಟ್ ವಾಹನದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸುವ ಮೂಲಕ ಚಾಲಕರು ಮಾನವೀಯತೆ ಮೆರೆದಿದ್ದಾರೆ.

ಉಡುಪಿಯ ಸಂತೆಕಟ್ಟೆಯ ಆಶೀರ್ವಾದ ಜಂಕ್ಷನ್ ಬಳಿ ಇಂದು ಗ್ಯಾಸ್ ಸಿಲಿಂಡರ್ ತುಂಬಿದ್ದ ಮಹೀಂದ್ರಾ ಪಿಕಪ್ ಹಾಗೂ ಆಟೋರಿಕ್ಷಾ ಮಧ್ಯೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯ ಗೊಂಡಿದ್ದರು.

ಘಟನೆ ನಡೆದು ಸಾಕಷ್ಟು ಹೊತ್ತಾದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಯಾರೂ ಮುಂದೆ ಬಂದಿಲ್ಲ. ಅದೇ ಮಾರ್ಗ ವಾಗಿ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಮಲ್ಪೆಯ ಬ್ರದರ್ಸ್ ಟೂರಿಸ್ಟ್ ಬಸ್‌ನ ಚಾಲಕರಾದ ಬುರಾನ್ ಮಲ್ಪೆ ಹಾಗೂ ನವೀನ್ ಹನುಮಾನ್‌ನಗರ ಕೂಡಲೇ ಬಸ್ ನಿಲ್ಲಿಸಿ ಗಾಯಾಳನ್ನು ವಿಚಾರಿಸಿದರು. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಟೋ ಚಾಲಕನನ್ನು ತಮ್ಮ ಟೂರಿಸ್ಟ್ ಬಸ್‌ನಲ್ಲಿ ಕರೆದೊಯ್ದು, ನೇರವಾಗಿ ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News