ರಸ್ತೆ ಅಭಿವೃದ್ಧಿ ಕಾಮಗಾರಿ: ವಾಹನ ಸಂಚಾರ ನಿಷೇಧ

Update: 2024-08-28 14:48 GMT

ಸಾಂದರ್ಭಿಕ ಚಿತ್ರ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಹಿಷ ಮರ್ಧಿನಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪ ಯೋಗಿ ಇಲಾಖೆ ನಿರ್ವಹಿಸುತ್ತಿದ್ದು, ಒಂದು ಹಂತದ ಕಾಮಗಾರಿ ಮುಗಿದಿದೆ. ಪ್ರಸ್ತುತ ಇನ್ನೊಂದು ಹಂತದ ಕಾಮಗಾರಿಗಾಗಿ ಸೆಪ್ಟೆಂಬರ್ 30ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇದಿಸಲಾಗಿದೆ.

ಸಾರ್ವಜನಿಕರು ಬೈಲೂರು ಜಂಕ್ಷನ್‌ನಿಂದ ಹನುಮಾನ್ ಗ್ಯಾರೇಜ್ ರಸ್ತೆ ಮಾರ್ಗವಾಗಿ-ಕೊರಂಗ್ರಪಾಡಿ ರಸ್ತೆಯಿಂದ ಸಂಚರಿ ಸಲು ಬದಲಿ ಮಾರ್ಗ ಹಾಗೂ ಕಿನ್ನಿಮೂಲ್ಕಿ ಜಂಕ್ಷನ್‌ನಿಂದ ಬಲಾಯಿಪಾದೆಯಾಗಿ ಕೊರಂಗ್ರಪಾಡಿ ರಸ್ತೆಯಲ್ಲಿ ಸಂಚರಿಸಲು ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News