ಸೆ. 22: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಗೆ

Update: 2023-09-21 16:27 GMT

ಉಡುಪಿ, ಸೆ.21: ರಾಜ್ಯ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ಉಡುಪಿ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನಿಂದ ವಿಮಾನ ಮೂಲಕ ಬೆಳಗ್ಗೆ 11ಗಂಟೆಗೆ ಜಿಲ್ಲೆಗೆ ಆಗಮಿಸುವ ಸಚಿವೆ, 12:00ಗಂಟೆಗೆ ಕುಂದಾಪುರ ತಾಲೂಕು ಹಾಲಾಡಿಯ ಶಾಲಿನಿ ಜಿ.ಶಂಕರ್ ಕನ್ವೆಂಷನ್ ಸೆಂಟರ್‌ನಲ್ಲಿ ನಡೆಯುವ ಡಾ.ಎಚ್.ಎಸ್. ಶೆಟ್ಟಿ ಹುಟ್ಟೂರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಅಪರಾಹ್ನ 3:00ಗಂಟೆಗೆ ಉಡುಪಿಗೆ ಆಗಮಿಸುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವರು. 4:00ಗಂಟೆಗೆ ಜಿಲ್ಲಾ ಮಹಿಳಾ ಘಟಕದ ಪ್ರಮುಖ ರೊಂದಿಗೆ ಸಮಾಲೋಚನೆ ನಡೆಸುವ ಅವರು 5:00ಗಂಟೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಪ್ರಗತಿ ಪರಿಶೀಲನೆ ನಡೆಸುವರು. ಸಂಜೆ 6ಗಂಟೆಗೆ ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರೊಂದಿಗೆ ಸಮಾಲೋಚನೆ ನಡೆಸಲಿ ದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News