ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-10-13 12:18 GMT

ಹಿರಿಯಡ್ಕ, ಅ.13: ಮದ್ಯಪಾನ ಮಾಡಿ ಮನೆಯಲ್ಲಿ ಪತ್ನಿ ಜೊತೆ ಗಲಾಟೆ ಮಾಡುತ್ತಿದ್ದ ರಾಘವೇಂದ್ರ(41) ಎಂಬವರು ಮಾನಸಿಕವಾಗಿ ನೊಂದು ಅ.12 ರಂದು ಸಂಜೆ ಮನೆಯ ಹಿಂದಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ವಿಪರೀತ ಮದ್ಯ ವ್ಯಸನಿಯಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಅ.8ರಂದು ಮನೆಯಲ್ಲಿ ಇಲಿ ಪಾಶಾಣವನ್ನು ಮದ್ಯದೊಂದಿಗೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಪ್ಪುಂದದ ಬಾಲಕೃಷ್ಣ(57) ಎಂಬವರು ಅ.12ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿ ಯಾಗದೆ ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News