ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ

Update: 2024-08-13 16:57 GMT

ಹಿರಿಯಡ್ಕ, ಆ.13: ಕುಕ್ಕೆಹಳ್ಳಿ ಗ್ರಾಮದ ಸುಧಾಕರ್ ಎಂಬವರ ಮಗ ರಾಘವೇಂದ್ರ(44) ಎಂಬವರು ಮಾ.13ರಂದು ಬೆಳಿಗ್ಗೆ ಮನೆಯಿಂದ ಹೋದವರು ಈವರೆಗೂ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ನಿಟ್ಟೆ ಗ್ರಾಮದ ಆಸ್ವಲ್ಡ್ ಕಿಶೋರ್ ಎಂಬವರ ಮಗ ಕ್ಲಿಫರ್ಡ್ ಮೆಲ್ರಾಯ್(33) ಎಂಬವರು ಆ.12ರಂದು ಮನೆ ಯಿಂದ ಪಡುಬಿದ್ರೆಗೆ ಹೋಗಿ ಬರುವುದಾಗಿ ಹೇಳಿ ಸ್ಕೂಟರ್‌ನಲ್ಲಿ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News